Homeಮುಖಪುಟಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

ಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

"ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ"

- Advertisement -
- Advertisement -

ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರು ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದರು.

ಸಾವರ್ಕರ್‌ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗಿದೆ. 2003ರಲ್ಲಿ ಸಾವರ್ಕರ್ ಅವರ ಚಿತ್ರವನ್ನು ಸಂಸತ್ತಿನಲ್ಲಿ ಇರಿಸಲಾಗಿದ್ದಾಗ ಹೆಚ್ಚಿನ ರಾಜಕೀಯ ಪಕ್ಷಗಳು ಬಹಿಷ್ಕರಿಸಿದವು. ಆದರೆ ಅಂಡಮಾನ್ ಮತ್ತು ನಿಕೋಬಾರ್ ಜೈಲಿನಲ್ಲಿ ಅವರ ಹೆಸರಿನಲ್ಲಿದ್ದ ಫಲಕವನ್ನು ಸರ್ಕಾರ ಬದಲಾದ ಬಳಿಕ ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.

“ನೀವು ಸಾವರ್ಕರ್‌ ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಬಹುದು. ಆದರೆ ಅವರನ್ನು ಅಸಹ್ಯವಾಗಿ ನೋಡುವುದು ಸರಿಯಲ್ಲ. ಅವರ ರಾಷ್ಟ್ರೀಯ ಕೊಡುಗೆಗಳನ್ನು ಅವಹೇಳನ ಮಾಡುವ ಕ್ರಮವನ್ನು ಸಹಿಸಲಾಗುವುದಿಲ್ಲ” ಎಂದು ಸಿಂಗ್ ಎಚ್ಚರಿಸಿದ್ದಾರೆ.

“ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ. ಅವರು ಹಿಂದುತ್ವದೊಂದಿಗೆ ನಂಬಿಕೆ ಇಟ್ಟಿದ್ದರು. ವಾಸ್ತವವಾದಿಯಾಗಿದ್ದರು. ಏಕತೆಗೆ ಸಂಸ್ಕೃತಿಯ ಏಕರೂಪತೆ ಮುಖ್ಯ ಎಂದು ಅವರು ನಂಬಿದ್ದರು. ಅವರೊಬ್ಬ ವ್ಯಕ್ತಿಯಲ್ಲ, ಒಂದು ಸಿದ್ಧಾಂತ. ಅವರ ಅನುಯಾಯಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ” ಎಂದು ಹೇಳಿದರು.

 ಸಾವರ್ಕರ್‌- ವಿವೇಕಾನಂದರ ನಡುವೆ ವ್ಯತ್ಯಾಸವಿಲ್ಲ: ಭಾಗವತ್‌‌

ಮೋಹನ್‌ ಭಾಗವತ್‌ ಮಾತನಾಡಿ, “ಸಾವರ್ಕರ್‌ ಕುರಿತ ಅಪಪ್ರಚಾರ ಸ್ವಾತಂತ್ರ್ಯ ನಂತರದಲ್ಲಿ ಆರಂಭವಾಯಿತು. ಸ್ವಾಮಿ ವಿವೇಕಾನಂದ, ಸ್ವಾಮಿ ದಯಾನಂದ ಸರಸ್ವತಿ ಮತ್ತು ಯೋಗಿ ಅರವಿಂದ್ ಅವರ ಖ್ಯಾತಿಯನ್ನು ಕೆಡಿಸುವುದು ಈ ವಿರೋಧಿಗಳ ಗುರಿಯಾಗಿತ್ತು. ಏಕೆಂದರೆ ಅವರು ಭಾರತೀಯ ರಾಷ್ಟ್ರೀಯತೆಯನ್ನು ಮುನ್ನೆಲೆಗೆ ತಂದವರಾಗಿದ್ದರು. ಸಾವರ್ಕರ್‌ ಮತ್ತು ವಿವೇಕಾನಂದರ ರಾಷ್ಟ್ರೀಯತೆಯ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ಪ್ರತಿಪಾದಿಸಿದರು.

ಪುಸ್ತಕವನ್ನು ಪರಿಚಯಿಸುವಾಗ, ಔರಂಗಜೇಬನಂತಹ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡಬಾರದೆಂದು ವಾದಿಸಿದ ಮಹೂರ್ಕರ್ ಅವರ ಮಾತನ್ನು ಒಪ್ಪಿಕೊಂಡ ಭಾಗವತ್, “ಮಹೂರ್ಕರ್ ಹೇಳಿದ್ದನ್ನು, ನಾನು ಅವರನ್ನು 100 ಪ್ರತಿಶತ ಬೆಂಬಲಿಸುತ್ತೇನೆ” ಎಂದಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಹಿಂದೂ-ಮುಸ್ಲಿಂ ಏಕತೆಗೆ ಮೂಲಭೂತವಾದ ಮತ್ತು ವಹಾಬಿಸಂನಿಂದ ಅಪಾಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು. “ಬ್ರಿಟಿಷರು ತಮ್ಮ ವೈವಿಧ್ಯತೆಯ ಹೊರತಾಗಿಯೂ ಭಾರತೀಯರು ಒಗ್ಗೂಡಿ ನಮ್ಮನ್ನು ಹೊರಹಾಕಬಹುದು ಎಂದು ಅರಿತುಕೊಂಡರು. ಆದ್ದರಿಂದ ಅವರು ಮೂಲಭೂತವಾದದಿಂದಾಗಿ ರೂಪುಗೊಳ್ಳಲು ಆರಂಭಿಸಿದ ಬಿರುಕನ್ನು ವಿಸ್ತರಿಸಿದರು. ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿರುವಾಗ ಇದನ್ನು ಅನುಭವಿಸಿದರು. ಅವರು ಅಂಡಮಾನ್‌ನಿಂದ ಹಿಂದಿರುಗಿದ ನಂತರ ಅವರ ಹಿಂದುತ್ವ ಮಹಾಕಾವ್ಯವನ್ನು ಬರೆಯಲಾಗಿದೆ” ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಮುಖ್ಯಸ್ಥರು ಭಾರತದಲ್ಲಿ ಯಾವಾಗ ಧರ್ಮದ ಆಧಾರದ ಮೇಲೆ ಎರಡು ರಾಷ್ಟ್ರಗಳಿವೆ ಎಂಬ ಧ್ವನಿಗಳು ಏಳಲಾರಂಭಿಸಿದವು, ಆಗ ಸಾವರ್ಕರ್‌‌, ರಾಷ್ಟ್ರೀಯತೆಯು ಧಾರ್ಮಿಕ ಭಿನ್ನತೆಗಳನ್ನು ಮೀರಿದ್ದು ಮತ್ತು ನಾವು ಭಿನ್ನವಾಗಿಲ್ಲ ಎಂದು ಕೂಗಬೇಕಾಯಿತು ಎಂದರು.

ರಾಜನಾಥ್‌ ಸಿಂಗ್‌ ಹೇಳಿಕೆಗೆ ಟೀಕೆ

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬುವವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...