Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....