Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...