Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...