Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....