Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...