Homeಕರ್ನಾಟಕಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

ಗಾಂಧಿ ತಾತನ ಶಾಂತಿ ಸಂದೇಶ ಸಾರಲು ಮುಂದಾದ ’ನಮ್ಮ ಧ್ವನಿ’ ಬಳಗದಿಂದ ವಿಶಿಷ್ಟ ಗಾಂಧಿ ಜಯಂತಿ

"ನಮ್ಮ ಧ್ವನಿ" ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ ದಿವಂಗತ ಮಹೇಂದ್ರ ಕುಮಾರ್‌ ಅವರು ಪ್ರಾರಂಭಿಸಿದ್ದ ’ನಮ್ಮ ಧ್ವನಿ’ ತಂಡವು ಗಾಂಧಿ ಜಯಂತಿಯನ್ನು ’ನಮ್ಮ ನಡೆ ಗಾಂಧಿ ಕಡೆ’ ಎಂಬ ಧ್ಯೇಯದೊಂದಿಗೆ ಎಂಬ ವಿನೂತನ ರೀತಿಯಲ್ಲಿ ಆಚರಿಸಿತು.

ಬೆಂಗಳೂರಿನ ಟೌನ್‌ಹಾಲ್‌‌ನಿಂದ ಕಾಲ್ನಡಿಗೆಯಲ್ಲಿ ಹೊರಟ ತಂಡವು ಮೆಜೆಸ್ಟಿಕ್ ಮೂಲಕ ಹಾದು ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆಯವರೆಗೂ ಮೆರವಣಿಗೆ ನಡೆಸಿತು. ಗಾಂಧಿಯ ಆಶಯಗಳ ಪೋಸ್ಟರ್‌ ಪ್ರದರ್ಶನ, ಗಾಂಧಿ ಜಯಂತಿಯ ಶುಭಾಶಯ ಪತ್ರ ಹಾಗೂ ಶಾಂತಿಯ ಸಂಕೇತವಾಗಿ ಬಿಳಿ ಗುಲಾಬಿಯನ್ನು ಹಂಚುತ್ತಾ ಗಮನ ಸೆಳೆಯಿತು.

ಇದನ್ನೂ ಓದಿ: ಮಹೇಂದ್ರ ಕುಮಾರ್ ಎಂಬ ‘ನಮ್ಮ ಧ್ವನಿ’ಯ ನೆನಪು: ಮುನೀರ್‌ ಕಾಟಿಪಳ್ಳ

ಜಾಥಾದಲ್ಲಿ ಚಿಂತಕ, ನಟ ಚೇತನ್, ಹಾಗೂ ಸಾಹಿತಿ ಯೋಗೇಶ್ ಮೇಷ್ಟ್ರ ಕೂಡಾ ಭಾಗವಹಿಸಿದ್ದರು. ಕನ್ನಡ ಸಂಘಟನೆಯ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಹಾಗೂ ಹಲವಾರು ಪಾದಚಾರಿಗಳು ಮೆರವಣಿಗೆಯಲ್ಲಿ ಹೆಜ್ಜೆಯಾಕಿದರು.

“ಜಗತ್ತಿನಲ್ಲಿ ಶಾಂತಿ ಬೇಕು ಎಂದರೆ ಅದನ್ನು ನಿಮ್ಮ ಮಕ್ಕಳಿಂದಲೇ ಆರಂಭಿಸಿ. ಸತ್ಯ, ಪ್ರೀತಿ, ಅಹಿಂಸೆ ಎಲ್ಲಿ ನೆಲೆಸಿರುತ್ತದೆಯೋ ಅಲ್ಲಿ ಶಾಂತಿ ತೃಪ್ತಿ ನೆಲೆಸುತ್ತದೆ. ಸಹನೆ ಕಳೆದುಕೊಳ್ಳುವುದೆಂದರೆ ಯುದ್ಧವನ್ನು ಸೋತಂತೆ. ಅಹಿಂಸೋ ಪರಮೋ ಧರ್ಮ” ಎಂಬ ಬರಹಗಳಿದ್ದ ಪ್ಲಕಾರ್ಡುಗಳನ್ನು ಹಿಡಿದು, ಗಾಂಧೀಜಿ ಅಮರರಾಗಲಿ, ಮಹೇಂದ್ರ ಕುಮಾರ್ ಅಮರರಾಗಲಿ ಎಂಬ ಘೋಷಣೆಗಳೊಂದಿಗೆ ಮೆರವಣಗೆ ನಡೆಯಿತು.

ಜಾಥಾದಲ್ಲಿ ಸಾಹಿತಿ ಯೋಗೇಶ್ ಮೇಷ್ಟ್ರು ಭಾಗವಹಿಸಿದರು.

ಯುವ ಮುಖಂಡ, ಚಿಂತಕ ರಾ ಚಿಂತನ್ ಮಾತನಾಡಿ, “ನಮ್ಮ ಧ್ವನಿ ಮಹೇಂದ್ರ ಕುಮಾರ್ ಮತ್ತು ನಮ್ಮೆಲ್ಲರ ಕನಸು. ಈ ದೇಶದ ಶಾಂತಿ ಸೌಹಾರ್ದತೆಯನ್ನು ಕದಡುವ ಕೆಲಸಗಳು ನಡೆಯುತ್ತಿರುವಾಗ ಅದನ್ನು ಶಾಶ್ವತವಾಗಿ ನಿಲ್ಲಿಸಲು ನಮ್ಮ ಧ್ವನಿ ಆರಂಭವಾಯಿತು. ಈ ನಡುವೆ ನಾವು ಮಹೇಂದ್ರ ಕುಮಾರ್‌ರವರನ್ನು ಕಳೆದುಕೊಂಡು ಅಕ್ಷರಶಃ ತಬ್ಬಲಿಗಳಾಗಿದ್ದೆವು. ನಮ್ಮಧ್ವನಿಯನ್ನು ಮುಂದುವರೆಸಲು ಗಾಂಧಿ ಜಯಂತಿಯ ದಿನ ಪ್ರಸಸ್ತವಾದ ದಿನ. ಹಾಗಾಗಿ ನಾವು ಮೊಟ್ಟ ಮೊದಲ ಬಾರಿಗೆ ಬೀದಿಗಿಳಿದು ಗಾಂಧಿ ತಾತನ ಶಾಂತಿಯ ಸಂದೇಶಗಳನ್ನು ಜನರಿಗೆ ತಲುಪಿಸಲು ಈ ಜಾಥವನ್ನು ಹಮ್ಮಿಕೊಂಡಿದ್ದೇವೆ” ಎಂದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ’ನಮ್ಮ ಧ್ವನಿ’ ಬಳಗದ ಸಂಸ್ಥಾಪಕ ಸದಸ್ಯರಾದ ರುದ್ರು ಪುನೀತ್‌ ಆರ್‌.ಸಿ, “ಮಹೇಂದ್ರ ಕುಮಾರ್‌ ಅವರ ಆಶಯಗಳನ್ನು ಮುಂದುವರೆಸಲು ’ನಮ್ಮ ಧ್ವನಿ’ ತಂಡ ಬದ್ದವಾಗಿದೆ. ಮಹೇಂದ್ರರವರ ಆಶಯದಂತೆ ಅನ್ಯಾಯದ ವಿರುದ್ದ ’ನಮ್ಮ ಧ್ವನಿ’ ತಂಡವು ಯಾವತ್ತಿಗೂ ನಿಲ್ಲುತ್ತದೆ. ಕೊರೊನಾ ಕಾರಣದಿಂದ ತಂಡದ ಚಟುವಟಿಕೆ ತುಸು ನಿಧಾನವಾಗಿತ್ತಾದರೂ, ಇದೀಗ ತಂಡದ ಚಟುವಟಿಕೆಯನ್ನು ಮತ್ತೇ ಉತ್ಸಾಹದಿಂದ ಪ್ರಾರಂಭಿಸಿದ್ದೇವೆ” ಎಂದರು.

ಇದನ್ನೂ ಓದಿ: ಮಹೇಂದ್ರ ಕುಮಾರ್ ನಿಧನದ ಸಂಧಿಕಾಲ ಮತ್ತು ಫಿಡೆಲ್ ಕ್ಯಾಸ್ಟ್ರೊ!

ಜಾಥಾದಲ್ಲಿ ಭಾಗವಹಿಸಿದ ನಟ ಚೇತನ್

“ನಮ್ಮ ಧ್ವನಿ” ಎಂಬ ಉತ್ಸಾಹಿ ತಂಡವನ್ನು ಪ್ರಗತಿಪರ ಚಿಂತಕರಾದ ದಿವಂಗತ ಮಹೇಂದ್ರ ಕುಮಾರ್‌ರವರು ಕಟ್ಟಿದ್ದರು. ಸಮಾಜದಲ್ಲಿ ನಡೆಯುವ ಹಾಗುಹೋಗುಗಳ ಬಗ್ಗೆ ವಿಮರ್ಶಿಸುತ್ತಾ, ವಿಶ್ಲೇಷಿಸುತ್ತಾ ಅವರು ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು.

ಯುವಕರನ್ನು ತಲುಪಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದ್ದ ಮಹೇಂದ್ರ ಕುಮಾರ್‌, ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪುತ್ತಿದ್ದರು. ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್‌ನಲ್ಲಿ ಚಿಂತನಾರ್ಹ ಮತ್ತು ಸಕಾಲಿಕ ಸರಣಿ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...