Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...