Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...