Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...