Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....