Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...