Homeಮುಖಪುಟಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!

1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ.

- Advertisement -
- Advertisement -

ಅದು ಸ್ವಾತಂತ್ರ್ಯ ಸಂಗ್ರಾಮದ ಆಚೀಚೆಯ ದಿನ ಮಾನೆ; ಇಡೀ ಕರ್ನಾಟಕದಲ್ಲಿ ಗಾಂಧಿ ಜಿಲ್ಲೆ ಎಂಬ ಪ್ರತೀತಿ ಇದ್ದದ್ದು ಉತ್ತರ ಕನ್ನಡಕ್ಕೆ ಮಾತ್ರ! ಗಾಂಧೀಜಿ ಚಿಂತನೆಗಳಿಂದ ಪ್ರಭಾವಿತವಾಗಿದ್ದ ಜಿಲ್ಲೆ ಜೊತೆ ಗಾಂಧೀಜಿಗೂ ನಿಕಟ ಒಡನಾಟವಿತ್ತು. ಉತ್ತರ ಕನ್ನಡದಲ್ಲಿ ನಡೆದ ಅಸ್ಪೃಶ್ಯತೆ ವಿರುದ್ಧ, ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧ ಮತ್ತು ಬ್ರಿಟಿಷರ ವಿರುದ್ಧದ ಹಲವು ಹೋರಾಟಗಳಲ್ಲಿ ಗಾಂಧೀಜಿ ಪಾಲ್ಗೊಂಡು ಪ್ರೇರಣೆ ಆಗಿದ್ದರು. ಜಿಲ್ಲೆಯ ಅಂಕೋಲೆಯಂತೂ ಕರ್ನಾಟಕದ ಬಾರ್ಡೋಲಿ ಎಂದೇ ಹೆಸರುವಾಸಿ. ಇಲ್ಲಾಗಿರುವ ಹತ್ತಾರು ಸ್ವಾತಂತ್ರ್ಯ ಚಳುವಳಿಗಳು ಐತಿಹಾಸಿಕ! ಗಾಂಧಿ ಅನುಯಾಯಿಗಳ ದೊಡ್ಡ ದಂಡೇ ಅಂಕೋಲೆಯ ಹಳ್ಳಿ-ಹಳ್ಳಿಗಳಲ್ಲಿ ತಯಾರಾಗಿತ್ತು.

ಅಂಕೋಲೆಯ ಸುತ್ತಮುತ್ತ “ಆಗೇರ” ಎಂದು ಗುರುತಿಸುವ ದಲಿತ ಸಮುದಾಯವೊಂದಿದೆ. ಇವತ್ತಿಗೂ ತೀರ ಹಿಂದುಳಿದಿರುವ ಈ ಜಾತಿ ಜನರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ್ದರು. ಅಂಕೋಲೆಯ ವಂದಿಗೆ ಗ್ರಾಮದ ದಲಿತ ಕೇರಿಗೆ 1942ರಲ್ಲಿ ಗಾಂಧೀಜಿ ಬಂದಿದ್ದರು. ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಆಗೇರ ಸಮುದಾಯ ಬಲಿಯಾ ಮಾಧು ಆಗೇರಗೆ ಗಾಂಧೀಜಿ ಎಂದರೆ ಸಾಕ್ಷಾತ್ ದೇವರು!! ಗೌಂಡಿ ಉಪಕಸುಬಿನ ಈತ ಕೆಂಪು ಕಡಗಲ್ಲಿನಲ್ಲಿ ಗಾಂಧೀಜಿಯ ಉಬ್ಬುಶಿಲ್ಪ ನಿರ್ಮಿಸಿದ್ದರು. ಮನೆ ಮುಂದೆ ಕಟ್ಟೆಕಟ್ಟಿ ಅದನ್ನಲ್ಲಿ ಪ್ರತಿಷ್ಠಾಪಿಸಿದ್ದರು. ಈ ಗಾಂಧಿ ಪ್ರತಿಮೆಗೆ ಬಲಿಯಾ ಆಗೇರ ದಿನವೂ ಹೂ ಮುಡಿಸಿ ಧೂಪ-ದೀಪದಿಂದ ಪೂಜಿಸುತ್ತಿದ್ದರು.

ಗಾಂಧಿ
ಬಲಿಯಾ ಆಗೇರ ಕೆತ್ತಿ ದಿನವೂ ಪೂಜಿಸುತ್ತಿದ್ದ ಉಬ್ಬುಗಲ್ಲಿನ ಗಾಂಧಿ ಪ್ರತಿಮೆ

ಗಾಂಧಿ ಜಯಂತಿ, ಸ್ವಾತಂತ್ರೋತ್ಸವ ಮತ್ತು ಗಣರಾಜ್ಯೋತ್ಸವದಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದ ಬಲಿಯಾ ಸುತ್ತಲಿನವರಿಗೆ ಅಂದು ಸಿಹಿ ಹಂಚುತ್ತಿದ್ದರು. 1957ರಲ್ಲಿ ಗಾಂಧೀಜಿ ಪೂಜೆ ಪ್ರಾರಂಭಿಸಿದ್ದ ಬಲಿಯಾ ಆಗೇರ ತಮ್ಮ ಅಂತ್ಯದವರೆಗೂ ಒಂದು ದಿನವೂ ದೀಪಾರತಿ ತಪ್ಪಿಸಿದವರಲ್ಲ!! ಆ ನಂತರ ಆತನ ಮಕ್ಕಳು ಮತ್ತು ಮೊಮ್ಮಕ್ಕಳು ಈ ಪೂಜೆ ಸಂಪ್ರದಾಯವನ್ನು ಶ್ರದ್ಧೆಯಿಂದ ನಡೆಸಿಕೊಂಡು ಬಂದಿದ್ದಾರೆ. ಬಲಿಯಾ ಆಗೇರರ ಮಕ್ಕಳಾದ ಲಿಂಗು ಮತ್ತು ಥಾಕು ಇವತ್ತಿಗೂ ದೇವರಿಗೆ ಪೂಜಿಸುವಷ್ಟೇ ಭಕ್ತಿ-ಗೌರವದಿಂದ ಗಾಂಧಿ ಪ್ರತಿಮೆಗೂ ಆರತಿ ಎತ್ತುತ್ತಿದ್ದಾರೆ.

ನೌಕರಿ-ವ್ಯವಹಾರ ನಿಮಿತ್ತ ಊರಿಂದ ಹೊರಗಿರುವ ಬಲಿಯಾ ಆಗೇರರ ಮೊಮ್ಮಕ್ಕಳು ಮತ್ತು ಪರಿವಾರದವರು ಗಾಂಧಿ ಜಯಂತಿಯಂದು ಮಾತ್ರ ತಪ್ಪದೆ ಊರಿಗೆ ಬರುತ್ತಾರೆ. ಗಾಂಧಿ ಶಿಲ್ಪದ ಮುಂದೆ ಒಟ್ಟಾಗಿ ನಿಂತು ಗೌರವ ಸಲ್ಲಿಸುತ್ತಾರೆ. ಅಂದು ಈ ಆಗೇರ ಕುಟುಂಬದಲ್ಲಿ ವಿಶೇಷ ಪೂಜೋತ್ಸವ; ಹಬ್ಬದ ಸಡಗರ; ನೆಂಟರಿಷ್ಟರಿಗೆಲ್ಲಾ ಸಿಹಿ ಹಂಚಿಕೆ.

ಗಾಂಧಿ
ಬಲಿಯಾ ಆಗೇರ

ಇಲ್ಲಿ ದಾಖಲಿಸಬೇಕಾದ ಮತ್ತೊಂದು ಮಹತ್ವದ ಸಂಗತಿಯಿದೆ. ಕಟ್ಟಾ ಗಾಂಧಿವಾದಿಯಾಗಿದ್ದ ಬಲಿಯಾ ಆಗೇರ ತನಗೆ ಸರ್ಕಾರಿ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಸೌಲಭ್ಯ ಕೊಡಲು ಬಂದಾಗ ಬೇಡವೆಂದು ನಿರಾಕರಿಸಿದ್ದರು! ತಾನು ಮಾಡಿದ ಹೋರಾಟ ತನ್ನ ಜನ್ಮಭೂಮಿಗಾಗಿ; ಗಾಂಧೀಜಿಗಾಗಿ ಎಂಬ ಅರ್ಪಣಾಭಾವ ಬಲಿಯಾ ಆಗೇರರದಾಗಿತ್ತು; ಇದಕ್ಕೆಲ್ಲಾ ಇನಾಮು ಯಾಕೆಂದು ಆತ ಕೇಳುತ್ತಿದ್ದರು. ಗಾಂಧಿಯನ್ನು ಮತೋನ್ಮತ್ತರಾಗಿ ದ್ವೇಷಿಸುವವರಿಗೆ ಬಲಿಯಾ ಆಗೇರ ಅರ್ಥವಾಗದ ಒಗಟೇ ಬಿಡಿ!! ಗಾಂಧೀಜಿಯನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರನೆಂದು ಮೂದಲಿಸುವ ಬಾಯಿ ಹರುಕ ಧರ್ಮಾತ್ಮ ಸಂಸತ್ತಿನಲ್ಲಿ ಪ್ರತಿನಿಧಿಸುವ ಉತ್ತರಕನ್ನಡಲ್ಲಿ ಅದೇ ಗಾಂಧಿಯನ್ನು ತಲತಲಾಂತರದಿಂದ ಶ್ರದ್ಧೆಯಿಂದ ಪೂಜಿಸುವ ದಲಿತ ಕುಟುಂಬ ಒಂದಿದೇ ಎಂಬುದೇ ಅದ್ಭುತ!!!

  • ಶುದ್ದೋಧನ. ಪತ್ರಕರ್ತರು, ಉತ್ತರ ಕನ್ನಡ.

ಇದನ್ನೂ ಓದಿ: ಇಂದು ನಾವು ಗಾಂಧೀಜಿಯವರನ್ನೇಕೆ ನೆನೆಯಬೇಕು? – ಜಿ.ಎನ್‌. ನಾಗರಾಜ್

Also Read: When Godse´s Children Rule India, Gandhi is Crucified Everyday

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...