Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...