Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...