Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...