Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...