Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...