Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....