Homeಮುಖಪುಟಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

ಗಾಂಧೀಜಿ ನೆಚ್ಚಿನ ‘ಅಬೈಡ್‌‌ ವಿತ್‌ ಮೀ’ ಗೀತೆ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್‌ನಿಂದ ಹೊರಕ್ಕೆ!

- Advertisement -
- Advertisement -

ಗಾಂಧಿಯವರ ಪುಣ್ಯಸ್ಮರಣೆಯ ಮುನ್ನಾದಿನ ಜನವರಿ 29ರಂದು ನಡೆಯುವ ಗಣರಾಜ್ಯೋತ್ಸವದ ಬೀಟಿಂಗ್ ರಿಟ್ರೀಟ್ ಸಮಾರಂಭದ ಕೊನೆಯಲ್ಲಿ ನುಡಿಸಲಾಗುತ್ತಿದ್ದ ‘ಅಬೈಡ್‌‌ ವಿತ್ ಮಿ’ಯನ್ನು (ಮಹಾತ್ಮ ಗಾಂಧಿಯವರ ನೆಚ್ಚಿನ ಗೀತೆ) ಈ ವರ್ಷ ಕೈಬಿಡಲಾಗಿದೆ.

2020ರಲ್ಲಿ ‘ಅಬೈಡ್‌‌ ವಿತ್‌ ಮೀ’ಯನ್ನು ಹೊರಗಿಟ್ಟಿದ್ದು ಕೋಲಾಹಲವನ್ನು ಸೃಷ್ಟಿಸಿತ್ತು. ಆದರೆ 2021ರ ಸಮಾರಂಭದಲ್ಲಿ ಮತ್ತೆ ಈ ಗೀತೆಯನ್ನು ಹಾಡಲಾಗಿತ್ತು.

ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ನುಡಿಸಬೇಕಾದ 26 ಟ್ಯೂನ್‌ಗಳ ಅಧಿಕೃತ ಪಟ್ಟಿಯಲ್ಲಿ ಅಬೈಡ್‌‌ ವಿತ್‌ ಮಿ ಗೀತೆಯನ್ನು ಉಲ್ಲೇಖಿಸಿಲ್ಲ. 1950ರಿಂದ ಪ್ರತಿ ವರ್ಷ ಸಮಾರಂಭದಲ್ಲಿ ಈ ಗೀತೆಯನ್ನು ನುಡಿಸಲಾಗುತ್ತಿದೆ. ಆದರೆ 2020ರಲ್ಲಿ ಕೈಬಿಡಲಾಗಿತ್ತು.

ಹೆನ್ರಿ ಫ್ರಾನ್ಸಿಸ್ ಲೈಟ್ ಅವರ ಗೀತೆಯನ್ನು ವಿಲಿಯಂ ಹೆನ್ರಿ ಮಾಂಕ್ ಅವರ ಈವೆನ್ಟೈಡ್ ಟ್ಯೂನ್‌ಗೆ ಹೊಂದಿಸಲಾಗಿದೆ. ಇದು ಗಾಂಧೀಜಿಯವರಿಗೆ ಬಲು ಇಷ್ಟವಾದ ಗೀತೆಯಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 29ರ ಸಂಜೆ ದೆಹಲಿಯ ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವು ಗಣರಾಜ್ಯೋತ್ಸವ ಆಚರಣೆಯ ಅಂತ್ಯಭಾಗವಾಗಿರುತ್ತದೆ.

ಈ ವರ್ಷದ ಸಮಾರಂಭದಲ್ಲಿ ಮೊದಲಿಗೆ ಬಗ್ಲರ್‌ಗಳಿಂದ ಫ್ಯಾನ್‌ಫೇರ್‌ ಆಯೋಜಿಸಲಾಗಿದೆ. ನಂತರ ಮಾಸ್ಡ್ ಬ್ಯಾಂಡ್‌ಗಳಿಂದ ವೀರ್ ಸೈನಿಕ್, ಪೈಪ್ಸ್ ಮತ್ತು ಡ್ರಮ್ಸ್ ಬ್ಯಾಂಡ್‌ನಿಂದ ಆರು ಟ್ಯೂನ್‌ಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಬ್ಯಾಂಡ್‌ಗಳಿಂದ ಮೂರು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ನಂತರ ಏರ್ ಫೋರ್ಸ್ ಬ್ಯಾಂಡ್‌ನಿಂದ ನಾಲ್ಕು ಟ್ಯೂನ್‌ಗಳನ್ನು ನುಡಿಸಲಾಗುತ್ತದೆ. ಇದರಲ್ಲಿ ವಿಶೇಷವಾದ ಲಡಾಕೂ ಟ್ಯೂನ್ ಕೂಡ ಸೇರಿಸಲಾಗಿದೆ.

ನೇವಿ ಬ್ಯಾಂಡ್‌ನವರು ನಾಲ್ಕು ರಾಗಗಳನ್ನು ನುಡಿಸುತ್ತಾರೆ. ನಂತರ ಆರ್ಮಿ ಮಿಲಿಟರಿ ಬ್ಯಾಂಡ್ ಮೂರು ರಾಗಗಳನ್ನು ನುಡಿಸುತ್ತದೆ. ಕದಮ್ ಕದಮ್ ಬಧಯೇ ಜಾ, ಡ್ರಮ್ಮರ್ಸ್ ಕಾಲ್, ಏ ಮೇರೆ ವತನ್ ಕೆ ಲೋಗೋನ್ ಸೇರಿದಂತೆ ಮೂರು ಟ್ಯೂನ್‌ಗಳನ್ನು ಮಾಸ್ಡ್ ಬ್ಯಾಂಡ್‌ಗಳು ಕೊನೆಯಲ್ಲಿ ನುಡಿಸುತ್ತವೆ.

ಬಗ್ಲರ್‌ಗಳು ಸಾರೆ ಜಹಾನ್ ಸೆ ಅಚ್ಚಾ ನುಡಿಸುವುದರೊಂದಿಗೆ ಸಮಾರಂಭವು ಕೊನೆಗೊಳ್ಳುತ್ತದೆ. ಇಡೀ ಕಾರ್ಯಕ್ರಮದಲ್ಲಿ 44 ಬಗ್ಲರ್‌ಗಳು, 16 ಟ್ರಂಪೆಟರ್‌ಗಳು ಮತ್ತು 75 ಡ್ರಮ್ಮರ್‌ಗಳು ಭಾಗವಹಿಸಲಿದ್ದಾರೆ.

ಸುಮಾರು ಒಂದು ವಾರ ನಡೆಯುವ ಗಣರಾಜ್ಯೋತ್ಸವದ ಅಂತ್ಯವನ್ನು ಬೀಟಿಂಗ್ ರಿಟ್ರೀಟ್ ಸೂಚಿಸುತ್ತದೆ. ಗಣರಾಜ್ಯೋತ್ಸವ ಜನವರಿ 24ರಂದು ಪ್ರಾರಂಭವಾಗುತ್ತಿತ್ತು. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಿಂದ ಚಾಲನೆ ಪಡೆಯಲಿದೆ. ಈ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ‌ಆಚರಿಸಲಾಗುತ್ತಿದೆ.


ಇದನ್ನೂ ಓದಿರಿ: ಎನ್‌ಇಟಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ವಿವಾದ: ‘ಕೀ ಆನ್ಸರ್‌’ ನೋಡಿ ಪರೀಕ್ಷಾರ್ಥಿಗಳಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...