Homeಚಳವಳಿ"ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು"

“ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು”

- Advertisement -
- Advertisement -

ಉತ್ತರಪ್ರದೇಶದ ವಾರಾಣಸಿಯ ಸೆಂಟ್ರಲ್ ಹಿಂದು ಬಾಲಕರ ಶಾಲೆಯ ವಿದ್ಯಾರ್ಥಿ ಆಯುಷ್ ಚತುರ್ವೇದಿ, ಗಾಂಧಿ ಜಯಂತಿಯಂದು ಮಾಡಿದ ಭಾಷಣದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಧರ್ಮ ಹಾಗೂ ಕೋಮುಗಳ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಕೊಲೆಗೆ ಆಯುಷ್ ಭಾಷಣ ತಕ್ಕ ತಿರುಗೇಟು ನೀಡಿದೆ. ಗಾಂಧೀಜಿಯವರ ಕಥೆಯೊಂದಿಗೆ ಆರಂಭವಾಗುವ ಆತನ ಭಾಷಣವನ್ನು ರಾಜಶೇಖರ್ ಅಕ್ಕಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ…

ಮಹಾತ್ಮ ಗಾಂಧೀಜಿ ಒಂದು ಬಾರಿ ರೈಲಿನಲ್ಲಿ ಫರ್ಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟಿನಲ್ಲಿ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದರು. ಆ ಕಾಲದಲ್ಲಿ ವರ್ಣಭೇದ ನೀತಿ ವ್ಯಾಪಕವಾಗಿತ್ತು. ವರ್ಣಭೇದ ನೀತಿಯಿಂದಾಗಿಯೇ ಗಾಂಧೀಜಿಯವರನ್ನು ಟ್ರೇನ್‍ನಿಂದ ಹೊರದಬ್ಬಲಾಯಿತು. ಅಂದು ಆದ ಗಾಯವನ್ನು ಗಾಂಧೀಜಿಯವರು ಮಾಯಲು ಬಿಡಲೇ ಇಲ್ಲ. ಗಾಯವನ್ನು ಇನ್ನಷ್ಟು ಕೆದರಿದರು. ಇದರಿಂದ ಮಹಾತ್ಮನಿಗೆ ಸಿಕ್ಕ ಅಸ್ತ್ರವೇ ಅಸಹಕಾರ ಚಳವಳಿ.

ದುಷ್ಟರು ಹೇಳುವುದನ್ನು ಮಾಡದೇ ಇರುವುದೇ ಅಸಹಕಾರ ಚಳವಳಿ. ಇದರಿಂದಲೇ ಒಂದು ಇತಿಹಾಸದ ಪ್ರಾರಂಭವಾಯಿತು. ಲೂಯಿ ಫಿಷರ್ ಒಂದು ಮಾತು ಹೇಳುತ್ತಾರೆ, ರೈಲಿನಿಂದ ಗಾಂಧೀಜಿಯವರನ್ನು ಹೊರದಬ್ಬಿದ ಬ್ರಿಟಿಷ್ ವ್ಯಕ್ತಿಗೆ ತಾನು ಹೊರದಬ್ಬಿದ ವ್ಯಕ್ತಿ ಮುಂದೊಂದು ದಿನ ಬ್ರಿಟಿಷ್ ಆಳ್ವಿಕೆಯನ್ನು ವಿಶ್ವದಿಂದ ಸಂಪೂರ್ಣವಾಗಿ ಹೊರದಬ್ಬುತ್ತಾನೆ ಎಂದು ಮೊದಲೇ ತಿಳಿದಿದ್ದರೆ ಬ್ರಿಟಿಷ್ ವ್ಯಕ್ತಿ ಅಂತಹ ತಪ್ಪು ಮಾಡುತ್ತಿರಲಿಲ್ಲವೇನೋ..?

ಅತ್ಯಂತ ವಿಡಂಬನೆಯ ಒಂದು ವಿಷಯವೇನೆಂದರೆ, ಗಾಂಧೀಜಿಯ ದೇಶವಾಸಿಗಳೇ ಗಾಂಧೀಜಿಯನ್ನು ಅತ್ಯಂತ ಕಡಿಮೆ ಓದಿಕೊಂಡಿದ್ದಾರೆ ಮತ್ತು ಅರ್ಥೈಸಿಕೊಂಡಿದ್ದಾರೆ. ಹ್ಯಾರಿ ಪಾಟರ್ ಮತ್ತು ಚೇತನ್ ಭಗತ್ ಅವರ ಪುಸ್ತಕಗಳನ್ನು ಓದುವ ಯುವಜನತೆ, ಒಂದು ವೇಳೆ ಗಾಂಧೀಜಿಯವರನ್ನು ಗಂಭೀರವಾಗಿ ಓದಿಕೊಂಡಿದ್ದರೆ, ಇಂದು ನಮ್ಮ ಪೀಳಿಗೆಯ ಪಾಠಗಳೇ ಬೇರೆಯಾಗಿರುತ್ತಿದ್ದವು. ಆದರೆ, ನಾವು ಹಾಗೆ ಮಾಡಲಿಲ್ಲ. ಹಾಗೂ ಇದೇ ಕಾರಣಕ್ಕಾಗಿ ನಾವೆಲ್ಲ ಫ್ಯಾನ್ಸಿ ಫೇಸ್‍ಬುಕ್ ಗ್ಯಾಂಗ್ ಆಗಿ ಬದಲಾಗಿದ್ದೇವೆ.

ದೇಶ ವಿಭಜನೆಯ ಶಾಶ್ವತ ಕಾರಣ ಗಾಂಧೀಜಿ ಎಂದು ನಂಬುವುದು ಹಾಗೂ ಗಾಂಧೀಜಿಯವರನ್ನು ಮುಸ್ಲಿಂ ಪರ ಎಂದು ಕರೆಯುವುದು. ಒಂದು ಮಾತು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಗಾಂಧಿಗಿಂತ ದೊಡ್ಡ, ಮಹಾನ್ ಹಿಂದು ಯಾರೂ ಆಗಿಲ್ಲ. ಆದರೆ ಗಾಂಧೀಜಿಯ ‘ಹೇ ರಾಮ್’ ಮಂತ್ರ ಮಠಣದಿಂದ ಇತರೆ ಸಮುದಾಯಗಳು ಹೆದರುತ್ತಿರಲಿಲ್ಲ. ಏಕೆಂದರೆ, ಗಾಂಧೀಜಿ ಜಾತ್ಯತೀತತೆಯ ಪ್ರತೀಕವಾಗಿದ್ದರು. ಪ್ರಸ್ತುತ ಅಹಿಂಸೆಯನ್ನು ಹೇಡಿತನದ ಮತ್ತು ದೌರ್ಬಲ್ಯದ ಪ್ರತೀಕ ಎಂದೇ ಹೇಳಲಾಗುತ್ತಿದೆ. ಆದರೆ ಜನರು ಮರೆಯುತ್ತಿರುವ ಅಂಶವೇನೆಂದರೆ ವಿಶ್ವದ ಅತಿ ದೊಡ್ಡ ಸೇನೆಯೊಂದಿಗೆ ಶಸ್ತ್ರಾಸ್ತ್ರಗಳಿಂದ ಹೋರಾಟ ಮಾಡುವುದು ಸಾಧ್ಯವಿಲ್ಲ. ಅದಕ್ಕೆ ನಾವು ಆಯ್ಕೆ ಮಾಡಿಕೊಳ್ಳುವ ಅಸ್ತ್ರದ ಸಾಟಿಯನ್ನು ಅವರಿಗೆ ಮಾಡಲು ಸಾಧ್ಯವಾಗಬಾರದು. ಆ ಅಸ್ತ್ರವೇ ಅಹಿಂಸೆ. ಒಂದು ಕಣ್ಣಿಗೆ ಇನ್ನೊಂದು ಕಣ್ಣನ್ನು ತೆಗೆಯುವುದರಿಂದ ಸಂಪೂರ್ಣ ವಿಶ್ವವೇ ಕುರುಡಾಗುತ್ತದೆ ಎಂದು ಗಾಂಧೀಜಿ ಹೇಳುತ್ತಿದ್ದರು. ನಿಮ್ಮಲ್ಲಿರುವ ಪ್ರತಿಭೆಯನ್ನು ಹೆಚ್ಚಿಸದ ಶಿಕ್ಷಣ, ಮೂರ್ಖ ಶಿಕ್ಷಣವೆಂದೂ ಬಾಪೂಜಿ ಹೇಳುತ್ತಿದ್ದರು.

ಗಾಂಧೀಜಿ ಮತ್ತು ಇತರೆ ನಾಯಕರ, ಸೇನಾನಿಗಳ ಬಲಿದಾನ, ಆಂದೋಲನ ಮತ್ತು ಜೈಲುವಾಸದ ಪರಿಣಾಮ 1947ರ ಆಗಸ್ಟ್ 15ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನನ್ನು ನಾವೆಷ್ಟು ಪ್ರೀತಿಸಿದೆವೆಂದರೆ ಮಾರನೇ ವರ್ಷ ಮೂರು ಗುಂಡು ಹಾರಿಸಿ ಅವರ ಸಮಾಧಿ ಮಾಡಿಬಿಟ್ಟೆವು. ಆದರೆ ಗಾಂಧಿ ಎಂದೂ ಸಾಯುವವರಲ್ಲ. ಏಕೆಂದರೆ ಗಾಂಧಿ ಎನ್ನುವುದು ಒಂದು ವಿಚಾರದ ಹೆಸರು, ಅದು ಒಬ್ಬ ವ್ಯಕ್ತಿಯ ಹೆಸರಲ್ಲ. ಹೀಗಾಗಿ ವಿಚಾರ ಎಂದಿಗೂ ಜೀವಂತವಾಗಿರುತ್ತದೆ.

ಕೊನೆಯದಾಗಿ, ದುಷ್ಯಂತ್ ಕುಮಾರ್ ಅವರ ಒಂದು ಕವಿತೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ.

ದೇವರಿಲ್ಲವೇ? ಆಯಿತು, ಒಬ್ಬ ವ್ಯಕ್ತಿಯ ಕನಸಾದರೂ ಇದೆಯಲ್ಲ.

ನೋಡಲು ಒಂದು ಸುಂದರ ದೃಷ್ಯವಂತೂ ಇದೆಯಲ್ಲ

ಕಲ್ಲು ಕರಗುವುದಿಲ್ಲವೆಂದು ಅವರು ಸಮಾಧಾನದಲ್ಲಿದ್ದಾರೆ

ಧ್ವನಿಯಲ್ಲಿ ಪರಿಣಾಮ ಕಾಣಲೆಂದು ನಾನು ಕಾತುರನಾಗಿದ್ದೇನೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...