Homeಚಳವಳಿ"ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು"

“ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು”

- Advertisement -
- Advertisement -

ಉತ್ತರಪ್ರದೇಶದ ವಾರಾಣಸಿಯ ಸೆಂಟ್ರಲ್ ಹಿಂದು ಬಾಲಕರ ಶಾಲೆಯ ವಿದ್ಯಾರ್ಥಿ ಆಯುಷ್ ಚತುರ್ವೇದಿ, ಗಾಂಧಿ ಜಯಂತಿಯಂದು ಮಾಡಿದ ಭಾಷಣದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಧರ್ಮ ಹಾಗೂ ಕೋಮುಗಳ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಕೊಲೆಗೆ ಆಯುಷ್ ಭಾಷಣ ತಕ್ಕ ತಿರುಗೇಟು ನೀಡಿದೆ. ಗಾಂಧೀಜಿಯವರ ಕಥೆಯೊಂದಿಗೆ ಆರಂಭವಾಗುವ ಆತನ ಭಾಷಣವನ್ನು ರಾಜಶೇಖರ್ ಅಕ್ಕಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ…

ಮಹಾತ್ಮ ಗಾಂಧೀಜಿ ಒಂದು ಬಾರಿ ರೈಲಿನಲ್ಲಿ ಫರ್ಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟಿನಲ್ಲಿ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದರು. ಆ ಕಾಲದಲ್ಲಿ ವರ್ಣಭೇದ ನೀತಿ ವ್ಯಾಪಕವಾಗಿತ್ತು. ವರ್ಣಭೇದ ನೀತಿಯಿಂದಾಗಿಯೇ ಗಾಂಧೀಜಿಯವರನ್ನು ಟ್ರೇನ್‍ನಿಂದ ಹೊರದಬ್ಬಲಾಯಿತು. ಅಂದು ಆದ ಗಾಯವನ್ನು ಗಾಂಧೀಜಿಯವರು ಮಾಯಲು ಬಿಡಲೇ ಇಲ್ಲ. ಗಾಯವನ್ನು ಇನ್ನಷ್ಟು ಕೆದರಿದರು. ಇದರಿಂದ ಮಹಾತ್ಮನಿಗೆ ಸಿಕ್ಕ ಅಸ್ತ್ರವೇ ಅಸಹಕಾರ ಚಳವಳಿ.

ದುಷ್ಟರು ಹೇಳುವುದನ್ನು ಮಾಡದೇ ಇರುವುದೇ ಅಸಹಕಾರ ಚಳವಳಿ. ಇದರಿಂದಲೇ ಒಂದು ಇತಿಹಾಸದ ಪ್ರಾರಂಭವಾಯಿತು. ಲೂಯಿ ಫಿಷರ್ ಒಂದು ಮಾತು ಹೇಳುತ್ತಾರೆ, ರೈಲಿನಿಂದ ಗಾಂಧೀಜಿಯವರನ್ನು ಹೊರದಬ್ಬಿದ ಬ್ರಿಟಿಷ್ ವ್ಯಕ್ತಿಗೆ ತಾನು ಹೊರದಬ್ಬಿದ ವ್ಯಕ್ತಿ ಮುಂದೊಂದು ದಿನ ಬ್ರಿಟಿಷ್ ಆಳ್ವಿಕೆಯನ್ನು ವಿಶ್ವದಿಂದ ಸಂಪೂರ್ಣವಾಗಿ ಹೊರದಬ್ಬುತ್ತಾನೆ ಎಂದು ಮೊದಲೇ ತಿಳಿದಿದ್ದರೆ ಬ್ರಿಟಿಷ್ ವ್ಯಕ್ತಿ ಅಂತಹ ತಪ್ಪು ಮಾಡುತ್ತಿರಲಿಲ್ಲವೇನೋ..?

ಅತ್ಯಂತ ವಿಡಂಬನೆಯ ಒಂದು ವಿಷಯವೇನೆಂದರೆ, ಗಾಂಧೀಜಿಯ ದೇಶವಾಸಿಗಳೇ ಗಾಂಧೀಜಿಯನ್ನು ಅತ್ಯಂತ ಕಡಿಮೆ ಓದಿಕೊಂಡಿದ್ದಾರೆ ಮತ್ತು ಅರ್ಥೈಸಿಕೊಂಡಿದ್ದಾರೆ. ಹ್ಯಾರಿ ಪಾಟರ್ ಮತ್ತು ಚೇತನ್ ಭಗತ್ ಅವರ ಪುಸ್ತಕಗಳನ್ನು ಓದುವ ಯುವಜನತೆ, ಒಂದು ವೇಳೆ ಗಾಂಧೀಜಿಯವರನ್ನು ಗಂಭೀರವಾಗಿ ಓದಿಕೊಂಡಿದ್ದರೆ, ಇಂದು ನಮ್ಮ ಪೀಳಿಗೆಯ ಪಾಠಗಳೇ ಬೇರೆಯಾಗಿರುತ್ತಿದ್ದವು. ಆದರೆ, ನಾವು ಹಾಗೆ ಮಾಡಲಿಲ್ಲ. ಹಾಗೂ ಇದೇ ಕಾರಣಕ್ಕಾಗಿ ನಾವೆಲ್ಲ ಫ್ಯಾನ್ಸಿ ಫೇಸ್‍ಬುಕ್ ಗ್ಯಾಂಗ್ ಆಗಿ ಬದಲಾಗಿದ್ದೇವೆ.

ದೇಶ ವಿಭಜನೆಯ ಶಾಶ್ವತ ಕಾರಣ ಗಾಂಧೀಜಿ ಎಂದು ನಂಬುವುದು ಹಾಗೂ ಗಾಂಧೀಜಿಯವರನ್ನು ಮುಸ್ಲಿಂ ಪರ ಎಂದು ಕರೆಯುವುದು. ಒಂದು ಮಾತು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಗಾಂಧಿಗಿಂತ ದೊಡ್ಡ, ಮಹಾನ್ ಹಿಂದು ಯಾರೂ ಆಗಿಲ್ಲ. ಆದರೆ ಗಾಂಧೀಜಿಯ ‘ಹೇ ರಾಮ್’ ಮಂತ್ರ ಮಠಣದಿಂದ ಇತರೆ ಸಮುದಾಯಗಳು ಹೆದರುತ್ತಿರಲಿಲ್ಲ. ಏಕೆಂದರೆ, ಗಾಂಧೀಜಿ ಜಾತ್ಯತೀತತೆಯ ಪ್ರತೀಕವಾಗಿದ್ದರು. ಪ್ರಸ್ತುತ ಅಹಿಂಸೆಯನ್ನು ಹೇಡಿತನದ ಮತ್ತು ದೌರ್ಬಲ್ಯದ ಪ್ರತೀಕ ಎಂದೇ ಹೇಳಲಾಗುತ್ತಿದೆ. ಆದರೆ ಜನರು ಮರೆಯುತ್ತಿರುವ ಅಂಶವೇನೆಂದರೆ ವಿಶ್ವದ ಅತಿ ದೊಡ್ಡ ಸೇನೆಯೊಂದಿಗೆ ಶಸ್ತ್ರಾಸ್ತ್ರಗಳಿಂದ ಹೋರಾಟ ಮಾಡುವುದು ಸಾಧ್ಯವಿಲ್ಲ. ಅದಕ್ಕೆ ನಾವು ಆಯ್ಕೆ ಮಾಡಿಕೊಳ್ಳುವ ಅಸ್ತ್ರದ ಸಾಟಿಯನ್ನು ಅವರಿಗೆ ಮಾಡಲು ಸಾಧ್ಯವಾಗಬಾರದು. ಆ ಅಸ್ತ್ರವೇ ಅಹಿಂಸೆ. ಒಂದು ಕಣ್ಣಿಗೆ ಇನ್ನೊಂದು ಕಣ್ಣನ್ನು ತೆಗೆಯುವುದರಿಂದ ಸಂಪೂರ್ಣ ವಿಶ್ವವೇ ಕುರುಡಾಗುತ್ತದೆ ಎಂದು ಗಾಂಧೀಜಿ ಹೇಳುತ್ತಿದ್ದರು. ನಿಮ್ಮಲ್ಲಿರುವ ಪ್ರತಿಭೆಯನ್ನು ಹೆಚ್ಚಿಸದ ಶಿಕ್ಷಣ, ಮೂರ್ಖ ಶಿಕ್ಷಣವೆಂದೂ ಬಾಪೂಜಿ ಹೇಳುತ್ತಿದ್ದರು.

ಗಾಂಧೀಜಿ ಮತ್ತು ಇತರೆ ನಾಯಕರ, ಸೇನಾನಿಗಳ ಬಲಿದಾನ, ಆಂದೋಲನ ಮತ್ತು ಜೈಲುವಾಸದ ಪರಿಣಾಮ 1947ರ ಆಗಸ್ಟ್ 15ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನನ್ನು ನಾವೆಷ್ಟು ಪ್ರೀತಿಸಿದೆವೆಂದರೆ ಮಾರನೇ ವರ್ಷ ಮೂರು ಗುಂಡು ಹಾರಿಸಿ ಅವರ ಸಮಾಧಿ ಮಾಡಿಬಿಟ್ಟೆವು. ಆದರೆ ಗಾಂಧಿ ಎಂದೂ ಸಾಯುವವರಲ್ಲ. ಏಕೆಂದರೆ ಗಾಂಧಿ ಎನ್ನುವುದು ಒಂದು ವಿಚಾರದ ಹೆಸರು, ಅದು ಒಬ್ಬ ವ್ಯಕ್ತಿಯ ಹೆಸರಲ್ಲ. ಹೀಗಾಗಿ ವಿಚಾರ ಎಂದಿಗೂ ಜೀವಂತವಾಗಿರುತ್ತದೆ.

ಕೊನೆಯದಾಗಿ, ದುಷ್ಯಂತ್ ಕುಮಾರ್ ಅವರ ಒಂದು ಕವಿತೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ.

ದೇವರಿಲ್ಲವೇ? ಆಯಿತು, ಒಬ್ಬ ವ್ಯಕ್ತಿಯ ಕನಸಾದರೂ ಇದೆಯಲ್ಲ.

ನೋಡಲು ಒಂದು ಸುಂದರ ದೃಷ್ಯವಂತೂ ಇದೆಯಲ್ಲ

ಕಲ್ಲು ಕರಗುವುದಿಲ್ಲವೆಂದು ಅವರು ಸಮಾಧಾನದಲ್ಲಿದ್ದಾರೆ

ಧ್ವನಿಯಲ್ಲಿ ಪರಿಣಾಮ ಕಾಣಲೆಂದು ನಾನು ಕಾತುರನಾಗಿದ್ದೇನೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...