Homeಚಳವಳಿ"ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು"

“ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು”

- Advertisement -
- Advertisement -

ಉತ್ತರಪ್ರದೇಶದ ವಾರಾಣಸಿಯ ಸೆಂಟ್ರಲ್ ಹಿಂದು ಬಾಲಕರ ಶಾಲೆಯ ವಿದ್ಯಾರ್ಥಿ ಆಯುಷ್ ಚತುರ್ವೇದಿ, ಗಾಂಧಿ ಜಯಂತಿಯಂದು ಮಾಡಿದ ಭಾಷಣದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಧರ್ಮ ಹಾಗೂ ಕೋಮುಗಳ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಕೊಲೆಗೆ ಆಯುಷ್ ಭಾಷಣ ತಕ್ಕ ತಿರುಗೇಟು ನೀಡಿದೆ. ಗಾಂಧೀಜಿಯವರ ಕಥೆಯೊಂದಿಗೆ ಆರಂಭವಾಗುವ ಆತನ ಭಾಷಣವನ್ನು ರಾಜಶೇಖರ್ ಅಕ್ಕಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ…

ಮಹಾತ್ಮ ಗಾಂಧೀಜಿ ಒಂದು ಬಾರಿ ರೈಲಿನಲ್ಲಿ ಫರ್ಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟಿನಲ್ಲಿ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದರು. ಆ ಕಾಲದಲ್ಲಿ ವರ್ಣಭೇದ ನೀತಿ ವ್ಯಾಪಕವಾಗಿತ್ತು. ವರ್ಣಭೇದ ನೀತಿಯಿಂದಾಗಿಯೇ ಗಾಂಧೀಜಿಯವರನ್ನು ಟ್ರೇನ್‍ನಿಂದ ಹೊರದಬ್ಬಲಾಯಿತು. ಅಂದು ಆದ ಗಾಯವನ್ನು ಗಾಂಧೀಜಿಯವರು ಮಾಯಲು ಬಿಡಲೇ ಇಲ್ಲ. ಗಾಯವನ್ನು ಇನ್ನಷ್ಟು ಕೆದರಿದರು. ಇದರಿಂದ ಮಹಾತ್ಮನಿಗೆ ಸಿಕ್ಕ ಅಸ್ತ್ರವೇ ಅಸಹಕಾರ ಚಳವಳಿ.

ದುಷ್ಟರು ಹೇಳುವುದನ್ನು ಮಾಡದೇ ಇರುವುದೇ ಅಸಹಕಾರ ಚಳವಳಿ. ಇದರಿಂದಲೇ ಒಂದು ಇತಿಹಾಸದ ಪ್ರಾರಂಭವಾಯಿತು. ಲೂಯಿ ಫಿಷರ್ ಒಂದು ಮಾತು ಹೇಳುತ್ತಾರೆ, ರೈಲಿನಿಂದ ಗಾಂಧೀಜಿಯವರನ್ನು ಹೊರದಬ್ಬಿದ ಬ್ರಿಟಿಷ್ ವ್ಯಕ್ತಿಗೆ ತಾನು ಹೊರದಬ್ಬಿದ ವ್ಯಕ್ತಿ ಮುಂದೊಂದು ದಿನ ಬ್ರಿಟಿಷ್ ಆಳ್ವಿಕೆಯನ್ನು ವಿಶ್ವದಿಂದ ಸಂಪೂರ್ಣವಾಗಿ ಹೊರದಬ್ಬುತ್ತಾನೆ ಎಂದು ಮೊದಲೇ ತಿಳಿದಿದ್ದರೆ ಬ್ರಿಟಿಷ್ ವ್ಯಕ್ತಿ ಅಂತಹ ತಪ್ಪು ಮಾಡುತ್ತಿರಲಿಲ್ಲವೇನೋ..?

ಅತ್ಯಂತ ವಿಡಂಬನೆಯ ಒಂದು ವಿಷಯವೇನೆಂದರೆ, ಗಾಂಧೀಜಿಯ ದೇಶವಾಸಿಗಳೇ ಗಾಂಧೀಜಿಯನ್ನು ಅತ್ಯಂತ ಕಡಿಮೆ ಓದಿಕೊಂಡಿದ್ದಾರೆ ಮತ್ತು ಅರ್ಥೈಸಿಕೊಂಡಿದ್ದಾರೆ. ಹ್ಯಾರಿ ಪಾಟರ್ ಮತ್ತು ಚೇತನ್ ಭಗತ್ ಅವರ ಪುಸ್ತಕಗಳನ್ನು ಓದುವ ಯುವಜನತೆ, ಒಂದು ವೇಳೆ ಗಾಂಧೀಜಿಯವರನ್ನು ಗಂಭೀರವಾಗಿ ಓದಿಕೊಂಡಿದ್ದರೆ, ಇಂದು ನಮ್ಮ ಪೀಳಿಗೆಯ ಪಾಠಗಳೇ ಬೇರೆಯಾಗಿರುತ್ತಿದ್ದವು. ಆದರೆ, ನಾವು ಹಾಗೆ ಮಾಡಲಿಲ್ಲ. ಹಾಗೂ ಇದೇ ಕಾರಣಕ್ಕಾಗಿ ನಾವೆಲ್ಲ ಫ್ಯಾನ್ಸಿ ಫೇಸ್‍ಬುಕ್ ಗ್ಯಾಂಗ್ ಆಗಿ ಬದಲಾಗಿದ್ದೇವೆ.

ದೇಶ ವಿಭಜನೆಯ ಶಾಶ್ವತ ಕಾರಣ ಗಾಂಧೀಜಿ ಎಂದು ನಂಬುವುದು ಹಾಗೂ ಗಾಂಧೀಜಿಯವರನ್ನು ಮುಸ್ಲಿಂ ಪರ ಎಂದು ಕರೆಯುವುದು. ಒಂದು ಮಾತು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಗಾಂಧಿಗಿಂತ ದೊಡ್ಡ, ಮಹಾನ್ ಹಿಂದು ಯಾರೂ ಆಗಿಲ್ಲ. ಆದರೆ ಗಾಂಧೀಜಿಯ ‘ಹೇ ರಾಮ್’ ಮಂತ್ರ ಮಠಣದಿಂದ ಇತರೆ ಸಮುದಾಯಗಳು ಹೆದರುತ್ತಿರಲಿಲ್ಲ. ಏಕೆಂದರೆ, ಗಾಂಧೀಜಿ ಜಾತ್ಯತೀತತೆಯ ಪ್ರತೀಕವಾಗಿದ್ದರು. ಪ್ರಸ್ತುತ ಅಹಿಂಸೆಯನ್ನು ಹೇಡಿತನದ ಮತ್ತು ದೌರ್ಬಲ್ಯದ ಪ್ರತೀಕ ಎಂದೇ ಹೇಳಲಾಗುತ್ತಿದೆ. ಆದರೆ ಜನರು ಮರೆಯುತ್ತಿರುವ ಅಂಶವೇನೆಂದರೆ ವಿಶ್ವದ ಅತಿ ದೊಡ್ಡ ಸೇನೆಯೊಂದಿಗೆ ಶಸ್ತ್ರಾಸ್ತ್ರಗಳಿಂದ ಹೋರಾಟ ಮಾಡುವುದು ಸಾಧ್ಯವಿಲ್ಲ. ಅದಕ್ಕೆ ನಾವು ಆಯ್ಕೆ ಮಾಡಿಕೊಳ್ಳುವ ಅಸ್ತ್ರದ ಸಾಟಿಯನ್ನು ಅವರಿಗೆ ಮಾಡಲು ಸಾಧ್ಯವಾಗಬಾರದು. ಆ ಅಸ್ತ್ರವೇ ಅಹಿಂಸೆ. ಒಂದು ಕಣ್ಣಿಗೆ ಇನ್ನೊಂದು ಕಣ್ಣನ್ನು ತೆಗೆಯುವುದರಿಂದ ಸಂಪೂರ್ಣ ವಿಶ್ವವೇ ಕುರುಡಾಗುತ್ತದೆ ಎಂದು ಗಾಂಧೀಜಿ ಹೇಳುತ್ತಿದ್ದರು. ನಿಮ್ಮಲ್ಲಿರುವ ಪ್ರತಿಭೆಯನ್ನು ಹೆಚ್ಚಿಸದ ಶಿಕ್ಷಣ, ಮೂರ್ಖ ಶಿಕ್ಷಣವೆಂದೂ ಬಾಪೂಜಿ ಹೇಳುತ್ತಿದ್ದರು.

ಗಾಂಧೀಜಿ ಮತ್ತು ಇತರೆ ನಾಯಕರ, ಸೇನಾನಿಗಳ ಬಲಿದಾನ, ಆಂದೋಲನ ಮತ್ತು ಜೈಲುವಾಸದ ಪರಿಣಾಮ 1947ರ ಆಗಸ್ಟ್ 15ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನನ್ನು ನಾವೆಷ್ಟು ಪ್ರೀತಿಸಿದೆವೆಂದರೆ ಮಾರನೇ ವರ್ಷ ಮೂರು ಗುಂಡು ಹಾರಿಸಿ ಅವರ ಸಮಾಧಿ ಮಾಡಿಬಿಟ್ಟೆವು. ಆದರೆ ಗಾಂಧಿ ಎಂದೂ ಸಾಯುವವರಲ್ಲ. ಏಕೆಂದರೆ ಗಾಂಧಿ ಎನ್ನುವುದು ಒಂದು ವಿಚಾರದ ಹೆಸರು, ಅದು ಒಬ್ಬ ವ್ಯಕ್ತಿಯ ಹೆಸರಲ್ಲ. ಹೀಗಾಗಿ ವಿಚಾರ ಎಂದಿಗೂ ಜೀವಂತವಾಗಿರುತ್ತದೆ.

ಕೊನೆಯದಾಗಿ, ದುಷ್ಯಂತ್ ಕುಮಾರ್ ಅವರ ಒಂದು ಕವಿತೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ.

ದೇವರಿಲ್ಲವೇ? ಆಯಿತು, ಒಬ್ಬ ವ್ಯಕ್ತಿಯ ಕನಸಾದರೂ ಇದೆಯಲ್ಲ.

ನೋಡಲು ಒಂದು ಸುಂದರ ದೃಷ್ಯವಂತೂ ಇದೆಯಲ್ಲ

ಕಲ್ಲು ಕರಗುವುದಿಲ್ಲವೆಂದು ಅವರು ಸಮಾಧಾನದಲ್ಲಿದ್ದಾರೆ

ಧ್ವನಿಯಲ್ಲಿ ಪರಿಣಾಮ ಕಾಣಲೆಂದು ನಾನು ಕಾತುರನಾಗಿದ್ದೇನೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...