Homeಚಳವಳಿ"ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು"

“ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು”

- Advertisement -
- Advertisement -

ಉತ್ತರಪ್ರದೇಶದ ವಾರಾಣಸಿಯ ಸೆಂಟ್ರಲ್ ಹಿಂದು ಬಾಲಕರ ಶಾಲೆಯ ವಿದ್ಯಾರ್ಥಿ ಆಯುಷ್ ಚತುರ್ವೇದಿ, ಗಾಂಧಿ ಜಯಂತಿಯಂದು ಮಾಡಿದ ಭಾಷಣದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಧರ್ಮ ಹಾಗೂ ಕೋಮುಗಳ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಕೊಲೆಗೆ ಆಯುಷ್ ಭಾಷಣ ತಕ್ಕ ತಿರುಗೇಟು ನೀಡಿದೆ. ಗಾಂಧೀಜಿಯವರ ಕಥೆಯೊಂದಿಗೆ ಆರಂಭವಾಗುವ ಆತನ ಭಾಷಣವನ್ನು ರಾಜಶೇಖರ್ ಅಕ್ಕಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ…

ಮಹಾತ್ಮ ಗಾಂಧೀಜಿ ಒಂದು ಬಾರಿ ರೈಲಿನಲ್ಲಿ ಫರ್ಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟಿನಲ್ಲಿ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದರು. ಆ ಕಾಲದಲ್ಲಿ ವರ್ಣಭೇದ ನೀತಿ ವ್ಯಾಪಕವಾಗಿತ್ತು. ವರ್ಣಭೇದ ನೀತಿಯಿಂದಾಗಿಯೇ ಗಾಂಧೀಜಿಯವರನ್ನು ಟ್ರೇನ್‍ನಿಂದ ಹೊರದಬ್ಬಲಾಯಿತು. ಅಂದು ಆದ ಗಾಯವನ್ನು ಗಾಂಧೀಜಿಯವರು ಮಾಯಲು ಬಿಡಲೇ ಇಲ್ಲ. ಗಾಯವನ್ನು ಇನ್ನಷ್ಟು ಕೆದರಿದರು. ಇದರಿಂದ ಮಹಾತ್ಮನಿಗೆ ಸಿಕ್ಕ ಅಸ್ತ್ರವೇ ಅಸಹಕಾರ ಚಳವಳಿ.

ದುಷ್ಟರು ಹೇಳುವುದನ್ನು ಮಾಡದೇ ಇರುವುದೇ ಅಸಹಕಾರ ಚಳವಳಿ. ಇದರಿಂದಲೇ ಒಂದು ಇತಿಹಾಸದ ಪ್ರಾರಂಭವಾಯಿತು. ಲೂಯಿ ಫಿಷರ್ ಒಂದು ಮಾತು ಹೇಳುತ್ತಾರೆ, ರೈಲಿನಿಂದ ಗಾಂಧೀಜಿಯವರನ್ನು ಹೊರದಬ್ಬಿದ ಬ್ರಿಟಿಷ್ ವ್ಯಕ್ತಿಗೆ ತಾನು ಹೊರದಬ್ಬಿದ ವ್ಯಕ್ತಿ ಮುಂದೊಂದು ದಿನ ಬ್ರಿಟಿಷ್ ಆಳ್ವಿಕೆಯನ್ನು ವಿಶ್ವದಿಂದ ಸಂಪೂರ್ಣವಾಗಿ ಹೊರದಬ್ಬುತ್ತಾನೆ ಎಂದು ಮೊದಲೇ ತಿಳಿದಿದ್ದರೆ ಬ್ರಿಟಿಷ್ ವ್ಯಕ್ತಿ ಅಂತಹ ತಪ್ಪು ಮಾಡುತ್ತಿರಲಿಲ್ಲವೇನೋ..?

ಅತ್ಯಂತ ವಿಡಂಬನೆಯ ಒಂದು ವಿಷಯವೇನೆಂದರೆ, ಗಾಂಧೀಜಿಯ ದೇಶವಾಸಿಗಳೇ ಗಾಂಧೀಜಿಯನ್ನು ಅತ್ಯಂತ ಕಡಿಮೆ ಓದಿಕೊಂಡಿದ್ದಾರೆ ಮತ್ತು ಅರ್ಥೈಸಿಕೊಂಡಿದ್ದಾರೆ. ಹ್ಯಾರಿ ಪಾಟರ್ ಮತ್ತು ಚೇತನ್ ಭಗತ್ ಅವರ ಪುಸ್ತಕಗಳನ್ನು ಓದುವ ಯುವಜನತೆ, ಒಂದು ವೇಳೆ ಗಾಂಧೀಜಿಯವರನ್ನು ಗಂಭೀರವಾಗಿ ಓದಿಕೊಂಡಿದ್ದರೆ, ಇಂದು ನಮ್ಮ ಪೀಳಿಗೆಯ ಪಾಠಗಳೇ ಬೇರೆಯಾಗಿರುತ್ತಿದ್ದವು. ಆದರೆ, ನಾವು ಹಾಗೆ ಮಾಡಲಿಲ್ಲ. ಹಾಗೂ ಇದೇ ಕಾರಣಕ್ಕಾಗಿ ನಾವೆಲ್ಲ ಫ್ಯಾನ್ಸಿ ಫೇಸ್‍ಬುಕ್ ಗ್ಯಾಂಗ್ ಆಗಿ ಬದಲಾಗಿದ್ದೇವೆ.

ದೇಶ ವಿಭಜನೆಯ ಶಾಶ್ವತ ಕಾರಣ ಗಾಂಧೀಜಿ ಎಂದು ನಂಬುವುದು ಹಾಗೂ ಗಾಂಧೀಜಿಯವರನ್ನು ಮುಸ್ಲಿಂ ಪರ ಎಂದು ಕರೆಯುವುದು. ಒಂದು ಮಾತು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಗಾಂಧಿಗಿಂತ ದೊಡ್ಡ, ಮಹಾನ್ ಹಿಂದು ಯಾರೂ ಆಗಿಲ್ಲ. ಆದರೆ ಗಾಂಧೀಜಿಯ ‘ಹೇ ರಾಮ್’ ಮಂತ್ರ ಮಠಣದಿಂದ ಇತರೆ ಸಮುದಾಯಗಳು ಹೆದರುತ್ತಿರಲಿಲ್ಲ. ಏಕೆಂದರೆ, ಗಾಂಧೀಜಿ ಜಾತ್ಯತೀತತೆಯ ಪ್ರತೀಕವಾಗಿದ್ದರು. ಪ್ರಸ್ತುತ ಅಹಿಂಸೆಯನ್ನು ಹೇಡಿತನದ ಮತ್ತು ದೌರ್ಬಲ್ಯದ ಪ್ರತೀಕ ಎಂದೇ ಹೇಳಲಾಗುತ್ತಿದೆ. ಆದರೆ ಜನರು ಮರೆಯುತ್ತಿರುವ ಅಂಶವೇನೆಂದರೆ ವಿಶ್ವದ ಅತಿ ದೊಡ್ಡ ಸೇನೆಯೊಂದಿಗೆ ಶಸ್ತ್ರಾಸ್ತ್ರಗಳಿಂದ ಹೋರಾಟ ಮಾಡುವುದು ಸಾಧ್ಯವಿಲ್ಲ. ಅದಕ್ಕೆ ನಾವು ಆಯ್ಕೆ ಮಾಡಿಕೊಳ್ಳುವ ಅಸ್ತ್ರದ ಸಾಟಿಯನ್ನು ಅವರಿಗೆ ಮಾಡಲು ಸಾಧ್ಯವಾಗಬಾರದು. ಆ ಅಸ್ತ್ರವೇ ಅಹಿಂಸೆ. ಒಂದು ಕಣ್ಣಿಗೆ ಇನ್ನೊಂದು ಕಣ್ಣನ್ನು ತೆಗೆಯುವುದರಿಂದ ಸಂಪೂರ್ಣ ವಿಶ್ವವೇ ಕುರುಡಾಗುತ್ತದೆ ಎಂದು ಗಾಂಧೀಜಿ ಹೇಳುತ್ತಿದ್ದರು. ನಿಮ್ಮಲ್ಲಿರುವ ಪ್ರತಿಭೆಯನ್ನು ಹೆಚ್ಚಿಸದ ಶಿಕ್ಷಣ, ಮೂರ್ಖ ಶಿಕ್ಷಣವೆಂದೂ ಬಾಪೂಜಿ ಹೇಳುತ್ತಿದ್ದರು.

ಗಾಂಧೀಜಿ ಮತ್ತು ಇತರೆ ನಾಯಕರ, ಸೇನಾನಿಗಳ ಬಲಿದಾನ, ಆಂದೋಲನ ಮತ್ತು ಜೈಲುವಾಸದ ಪರಿಣಾಮ 1947ರ ಆಗಸ್ಟ್ 15ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನನ್ನು ನಾವೆಷ್ಟು ಪ್ರೀತಿಸಿದೆವೆಂದರೆ ಮಾರನೇ ವರ್ಷ ಮೂರು ಗುಂಡು ಹಾರಿಸಿ ಅವರ ಸಮಾಧಿ ಮಾಡಿಬಿಟ್ಟೆವು. ಆದರೆ ಗಾಂಧಿ ಎಂದೂ ಸಾಯುವವರಲ್ಲ. ಏಕೆಂದರೆ ಗಾಂಧಿ ಎನ್ನುವುದು ಒಂದು ವಿಚಾರದ ಹೆಸರು, ಅದು ಒಬ್ಬ ವ್ಯಕ್ತಿಯ ಹೆಸರಲ್ಲ. ಹೀಗಾಗಿ ವಿಚಾರ ಎಂದಿಗೂ ಜೀವಂತವಾಗಿರುತ್ತದೆ.

ಕೊನೆಯದಾಗಿ, ದುಷ್ಯಂತ್ ಕುಮಾರ್ ಅವರ ಒಂದು ಕವಿತೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ.

ದೇವರಿಲ್ಲವೇ? ಆಯಿತು, ಒಬ್ಬ ವ್ಯಕ್ತಿಯ ಕನಸಾದರೂ ಇದೆಯಲ್ಲ.

ನೋಡಲು ಒಂದು ಸುಂದರ ದೃಷ್ಯವಂತೂ ಇದೆಯಲ್ಲ

ಕಲ್ಲು ಕರಗುವುದಿಲ್ಲವೆಂದು ಅವರು ಸಮಾಧಾನದಲ್ಲಿದ್ದಾರೆ

ಧ್ವನಿಯಲ್ಲಿ ಪರಿಣಾಮ ಕಾಣಲೆಂದು ನಾನು ಕಾತುರನಾಗಿದ್ದೇನೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...