Homeಚಳವಳಿ"ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು"

“ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು”

- Advertisement -
- Advertisement -

ಉತ್ತರಪ್ರದೇಶದ ವಾರಾಣಸಿಯ ಸೆಂಟ್ರಲ್ ಹಿಂದು ಬಾಲಕರ ಶಾಲೆಯ ವಿದ್ಯಾರ್ಥಿ ಆಯುಷ್ ಚತುರ್ವೇದಿ, ಗಾಂಧಿ ಜಯಂತಿಯಂದು ಮಾಡಿದ ಭಾಷಣದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಧರ್ಮ ಹಾಗೂ ಕೋಮುಗಳ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಕೊಲೆಗೆ ಆಯುಷ್ ಭಾಷಣ ತಕ್ಕ ತಿರುಗೇಟು ನೀಡಿದೆ. ಗಾಂಧೀಜಿಯವರ ಕಥೆಯೊಂದಿಗೆ ಆರಂಭವಾಗುವ ಆತನ ಭಾಷಣವನ್ನು ರಾಜಶೇಖರ್ ಅಕ್ಕಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ…

ಮಹಾತ್ಮ ಗಾಂಧೀಜಿ ಒಂದು ಬಾರಿ ರೈಲಿನಲ್ಲಿ ಫರ್ಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟಿನಲ್ಲಿ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದರು. ಆ ಕಾಲದಲ್ಲಿ ವರ್ಣಭೇದ ನೀತಿ ವ್ಯಾಪಕವಾಗಿತ್ತು. ವರ್ಣಭೇದ ನೀತಿಯಿಂದಾಗಿಯೇ ಗಾಂಧೀಜಿಯವರನ್ನು ಟ್ರೇನ್‍ನಿಂದ ಹೊರದಬ್ಬಲಾಯಿತು. ಅಂದು ಆದ ಗಾಯವನ್ನು ಗಾಂಧೀಜಿಯವರು ಮಾಯಲು ಬಿಡಲೇ ಇಲ್ಲ. ಗಾಯವನ್ನು ಇನ್ನಷ್ಟು ಕೆದರಿದರು. ಇದರಿಂದ ಮಹಾತ್ಮನಿಗೆ ಸಿಕ್ಕ ಅಸ್ತ್ರವೇ ಅಸಹಕಾರ ಚಳವಳಿ.

ದುಷ್ಟರು ಹೇಳುವುದನ್ನು ಮಾಡದೇ ಇರುವುದೇ ಅಸಹಕಾರ ಚಳವಳಿ. ಇದರಿಂದಲೇ ಒಂದು ಇತಿಹಾಸದ ಪ್ರಾರಂಭವಾಯಿತು. ಲೂಯಿ ಫಿಷರ್ ಒಂದು ಮಾತು ಹೇಳುತ್ತಾರೆ, ರೈಲಿನಿಂದ ಗಾಂಧೀಜಿಯವರನ್ನು ಹೊರದಬ್ಬಿದ ಬ್ರಿಟಿಷ್ ವ್ಯಕ್ತಿಗೆ ತಾನು ಹೊರದಬ್ಬಿದ ವ್ಯಕ್ತಿ ಮುಂದೊಂದು ದಿನ ಬ್ರಿಟಿಷ್ ಆಳ್ವಿಕೆಯನ್ನು ವಿಶ್ವದಿಂದ ಸಂಪೂರ್ಣವಾಗಿ ಹೊರದಬ್ಬುತ್ತಾನೆ ಎಂದು ಮೊದಲೇ ತಿಳಿದಿದ್ದರೆ ಬ್ರಿಟಿಷ್ ವ್ಯಕ್ತಿ ಅಂತಹ ತಪ್ಪು ಮಾಡುತ್ತಿರಲಿಲ್ಲವೇನೋ..?

ಅತ್ಯಂತ ವಿಡಂಬನೆಯ ಒಂದು ವಿಷಯವೇನೆಂದರೆ, ಗಾಂಧೀಜಿಯ ದೇಶವಾಸಿಗಳೇ ಗಾಂಧೀಜಿಯನ್ನು ಅತ್ಯಂತ ಕಡಿಮೆ ಓದಿಕೊಂಡಿದ್ದಾರೆ ಮತ್ತು ಅರ್ಥೈಸಿಕೊಂಡಿದ್ದಾರೆ. ಹ್ಯಾರಿ ಪಾಟರ್ ಮತ್ತು ಚೇತನ್ ಭಗತ್ ಅವರ ಪುಸ್ತಕಗಳನ್ನು ಓದುವ ಯುವಜನತೆ, ಒಂದು ವೇಳೆ ಗಾಂಧೀಜಿಯವರನ್ನು ಗಂಭೀರವಾಗಿ ಓದಿಕೊಂಡಿದ್ದರೆ, ಇಂದು ನಮ್ಮ ಪೀಳಿಗೆಯ ಪಾಠಗಳೇ ಬೇರೆಯಾಗಿರುತ್ತಿದ್ದವು. ಆದರೆ, ನಾವು ಹಾಗೆ ಮಾಡಲಿಲ್ಲ. ಹಾಗೂ ಇದೇ ಕಾರಣಕ್ಕಾಗಿ ನಾವೆಲ್ಲ ಫ್ಯಾನ್ಸಿ ಫೇಸ್‍ಬುಕ್ ಗ್ಯಾಂಗ್ ಆಗಿ ಬದಲಾಗಿದ್ದೇವೆ.

ದೇಶ ವಿಭಜನೆಯ ಶಾಶ್ವತ ಕಾರಣ ಗಾಂಧೀಜಿ ಎಂದು ನಂಬುವುದು ಹಾಗೂ ಗಾಂಧೀಜಿಯವರನ್ನು ಮುಸ್ಲಿಂ ಪರ ಎಂದು ಕರೆಯುವುದು. ಒಂದು ಮಾತು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಗಾಂಧಿಗಿಂತ ದೊಡ್ಡ, ಮಹಾನ್ ಹಿಂದು ಯಾರೂ ಆಗಿಲ್ಲ. ಆದರೆ ಗಾಂಧೀಜಿಯ ‘ಹೇ ರಾಮ್’ ಮಂತ್ರ ಮಠಣದಿಂದ ಇತರೆ ಸಮುದಾಯಗಳು ಹೆದರುತ್ತಿರಲಿಲ್ಲ. ಏಕೆಂದರೆ, ಗಾಂಧೀಜಿ ಜಾತ್ಯತೀತತೆಯ ಪ್ರತೀಕವಾಗಿದ್ದರು. ಪ್ರಸ್ತುತ ಅಹಿಂಸೆಯನ್ನು ಹೇಡಿತನದ ಮತ್ತು ದೌರ್ಬಲ್ಯದ ಪ್ರತೀಕ ಎಂದೇ ಹೇಳಲಾಗುತ್ತಿದೆ. ಆದರೆ ಜನರು ಮರೆಯುತ್ತಿರುವ ಅಂಶವೇನೆಂದರೆ ವಿಶ್ವದ ಅತಿ ದೊಡ್ಡ ಸೇನೆಯೊಂದಿಗೆ ಶಸ್ತ್ರಾಸ್ತ್ರಗಳಿಂದ ಹೋರಾಟ ಮಾಡುವುದು ಸಾಧ್ಯವಿಲ್ಲ. ಅದಕ್ಕೆ ನಾವು ಆಯ್ಕೆ ಮಾಡಿಕೊಳ್ಳುವ ಅಸ್ತ್ರದ ಸಾಟಿಯನ್ನು ಅವರಿಗೆ ಮಾಡಲು ಸಾಧ್ಯವಾಗಬಾರದು. ಆ ಅಸ್ತ್ರವೇ ಅಹಿಂಸೆ. ಒಂದು ಕಣ್ಣಿಗೆ ಇನ್ನೊಂದು ಕಣ್ಣನ್ನು ತೆಗೆಯುವುದರಿಂದ ಸಂಪೂರ್ಣ ವಿಶ್ವವೇ ಕುರುಡಾಗುತ್ತದೆ ಎಂದು ಗಾಂಧೀಜಿ ಹೇಳುತ್ತಿದ್ದರು. ನಿಮ್ಮಲ್ಲಿರುವ ಪ್ರತಿಭೆಯನ್ನು ಹೆಚ್ಚಿಸದ ಶಿಕ್ಷಣ, ಮೂರ್ಖ ಶಿಕ್ಷಣವೆಂದೂ ಬಾಪೂಜಿ ಹೇಳುತ್ತಿದ್ದರು.

ಗಾಂಧೀಜಿ ಮತ್ತು ಇತರೆ ನಾಯಕರ, ಸೇನಾನಿಗಳ ಬಲಿದಾನ, ಆಂದೋಲನ ಮತ್ತು ಜೈಲುವಾಸದ ಪರಿಣಾಮ 1947ರ ಆಗಸ್ಟ್ 15ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನನ್ನು ನಾವೆಷ್ಟು ಪ್ರೀತಿಸಿದೆವೆಂದರೆ ಮಾರನೇ ವರ್ಷ ಮೂರು ಗುಂಡು ಹಾರಿಸಿ ಅವರ ಸಮಾಧಿ ಮಾಡಿಬಿಟ್ಟೆವು. ಆದರೆ ಗಾಂಧಿ ಎಂದೂ ಸಾಯುವವರಲ್ಲ. ಏಕೆಂದರೆ ಗಾಂಧಿ ಎನ್ನುವುದು ಒಂದು ವಿಚಾರದ ಹೆಸರು, ಅದು ಒಬ್ಬ ವ್ಯಕ್ತಿಯ ಹೆಸರಲ್ಲ. ಹೀಗಾಗಿ ವಿಚಾರ ಎಂದಿಗೂ ಜೀವಂತವಾಗಿರುತ್ತದೆ.

ಕೊನೆಯದಾಗಿ, ದುಷ್ಯಂತ್ ಕುಮಾರ್ ಅವರ ಒಂದು ಕವಿತೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ.

ದೇವರಿಲ್ಲವೇ? ಆಯಿತು, ಒಬ್ಬ ವ್ಯಕ್ತಿಯ ಕನಸಾದರೂ ಇದೆಯಲ್ಲ.

ನೋಡಲು ಒಂದು ಸುಂದರ ದೃಷ್ಯವಂತೂ ಇದೆಯಲ್ಲ

ಕಲ್ಲು ಕರಗುವುದಿಲ್ಲವೆಂದು ಅವರು ಸಮಾಧಾನದಲ್ಲಿದ್ದಾರೆ

ಧ್ವನಿಯಲ್ಲಿ ಪರಿಣಾಮ ಕಾಣಲೆಂದು ನಾನು ಕಾತುರನಾಗಿದ್ದೇನೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...