Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...