Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...