Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...