Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...