Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...