Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...