Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...