Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

- Advertisement -
- Advertisement -

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ಸೂಚಿಸಿದೆ. ಇಲ್ಲಿ ಗಣೇಶ ಚತುರ್ಥಿ ನಡೆಸಬಾರದೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

“200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತು. ನ್ಯಾಯಾಲಯದ ತ್ರಿಸದಸ್ಯ ಪೀಠವು ‘ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಗಣೇಶ ಉತ್ಸವವನ್ನು ಆಚರಿಸಬಾರದು’ ಎಂದು ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮೈದಾನ ರಾಜ್ಯ ಸರ್ಕಾರಕ್ಕೆ ಸೇರಿದ್ದೋ ಅಥವಾ ವಕ್ಫ್ ಮಂಡಳಿಗೆ ಸೇರಿದ್ದೋ ಎಂಬ ವಿವಾದ ಹೈಕೋರ್ಟ್‌ನಲ್ಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಂಡಳಿಯ ವಕೀಲ ದುಶ್ಯಂತ್ ದವೆ, “ಧಾರ್ಮಿಕ ಅಲ್ಪಸಂಖ್ಯಾತ  ಹಕ್ಕುಗಳನ್ನು ಈ ರೀತಿ ತುಳಿಯಬಹುದು ಎಂಬ ಭಾವನೆಯನ್ನು ನೀಡಬೇಡಿ” ಎಂದು ಕೋರಿದರು.

“ಈ ಮೈದಾನದಲ್ಲಿ ಬೇರೆ ಯಾವುದೇ ಸಮುದಾಯದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದಿಲ್ಲ. ಇದನ್ನು ಕಾನೂನಿನ ಪ್ರಕಾರ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದ್ದಕ್ಕಿದ್ದಂತೆ ಇದು ವಿವಾದಿತ ಭೂಮಿ ಎಂದು ಪ್ರತಿಪಾದಿಸಲಾಗುತ್ತಿದೆ. ಗಣೇಶ ಚತುರ್ಥಿ ನಡೆಸಲು ಚಿಂತಿಸಲಾಗಿದೆ” ಎಂದು ವಕ್ಫ್‌ ತಿಳಿಸಿತು.

ಆದರೆ ಸರ್ಕಾರ ವಕೀಲರು ಎರಡು ದಿನ ಅವಕಾಶ ಕೋರಿದರು. ಈ ವೇಳೆ, ಮಂಡಳಿಯ ವಕೀಲರು, “ಬಾಬರಿ ಮಸೀದಿ ಪ್ರಕರಣದಲ್ಲಿ ಅಂದಿನ ಯುಪಿ ಸಿಎಂ ಕೂಡ ಭರವಸೆ ನೀಡಿದ್ದರು. ಅಲ್ಲಿ ಏನಾಯಿತು ಎಂದು ನಿಮಗೆ ತಿಳಿದಿದೆ” ಎಂದು 1992ರ ಮಸೀದಿ ಧ್ವಂಸವನ್ನು ಉಲ್ಲೇಖಿಸಿದರು.

ಇದಕ್ಕೂ ಮುನ್ನ ಮೈದಾನದಲ್ಲಿ ಇಂತಹ ಘಟನೆಗಳು ನಡೆದಿವೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಸರಕಾರಿ ವಕೀಲ ಮುಕುಲ್ ರೋಹಟಗಿ, ‘‘ಈಗ ಒಂದು ಕಾರ್ಯಕ್ರಮವನ್ನು ವಿರೋಧಿಸಲು ಅದು ಆಧಾರವಾಗುವುದಿಲ್ಲ. ಕಳೆದ 200 ವರ್ಷಗಳಿಂದ ಆಟದ ಮೈದಾನವಾಗಿ ಬಳಸಲಾಗುತ್ತಿತ್ತು. ಈ ಮೈದಾನ ಸರ್ಕಾರಕ್ಕೆ ಸೇರಿದೆ” ಎಂದರು.

“ದೆಹಲಿಯಲ್ಲಿ ದಸರಾ ವೇಳೆ ಪ್ರತಿಕೃತಿಗಳನ್ನು ಎಲ್ಲೆಂದರಲ್ಲಿ ದಹಿಸುತ್ತಾರೆ. ‘ಈ ಹಿಂದೂ ಹಬ್ಬವನ್ನು ಮಾಡಬೇಡಿ’ ಎಂದು ಜನರು ಹೇಳುತ್ತಾರೆಯೇ? ನಾವು ಸ್ವಲ್ಪ ವಿಶಾಲ ಮನೋಭಾವದಿಂದ ನೋಡಬೇಕು. ಗಣೇಶ ಚತುರ್ಥಿ ವೇಳೆ ಏನಾಗಲಿದೆ?” ಎಂದು ಪ್ರಶ್ನಿಸಿದರು.

ಆದರೆ ಮಂಡಳಿಯ ವಕೀಲ ದೇವ್, “ಈ ದೇಶದಲ್ಲಿ ಯಾವುದೇ ದೇವಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದರು.

“ವಕ್ಫ್ ಕಾಯಿದೆ 1995 ಪ್ರಕಾರ ಸರ್ಕಾರಿ ಸಂಸ್ಥೆಗಳು ವಶಪಡಿಸಿಕೊಂಡಿರುವ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕಾಗುತ್ತದೆ. ಈ ಆಸ್ತಿಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸ್ಥೆಯ ಒಡೆತನದ ಜಾಗದಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಯೋಚಿಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. “ಮುಂದಿನ ವರ್ಷ ಚುನಾವಣೆ ಇರುವುದರಿಂದ ಇದನ್ನು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ಬಿಬಿಎಂಪಿ ಚುನಾವಣೆ 2023ಕ್ಕೆ ನಡೆಯಲಿದೆ” ಎಂದು ಬೋರ್ಡ್ ಗಮನ ಸೆಳೆಯಿತು.

ಮಂಡಳಿಯ ವಕೀಲರಾದ ಕಪಿಲ್ ಸಿಬಲ್, ಆಗಸ್ಟ್ 9 ರಂದು ದಾಖಲಾಗಿರುವ ಎಫ್‌ಐಆರ್‌ ಉಲ್ಲೇಖಿಸಿದರು. “ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ವಿವಾದವಿದೆ (ಮತ್ತು) ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ದೂರು ದಾಖಲಾಗಿದೆ. ದೂರಿನಲ್ಲಿ ಬಾಬರಿ ಮಸೀದಿಯ ಬಗ್ಗೆ ಕೆಲವು ಉಲ್ಲೇಖಗಳನ್ನು ಮಾಡಿರುವುದು ತುಂಬಾ ಗೊಂದಲದ ಸಂಗತಿ” ಎಂದು ಅವರು ತಿಳಿಸಿದರು.

ಅಲ್ಲಿ ಉತ್ಸವ ಮಾಡಲು ಸರ್ಕಾರ ಅನುಮತಿ ನೀಡುವುದನ್ನು ಕೋರ್ಟ್ ಒಪ್ಪಲಿಲ್ಲ. ಕರ್ನಾಟಕವು ಇತ್ತೀಚಿನ ತಿಂಗಳುಗಳಲ್ಲಿ ಕೆಲವು ಕೋಮುಗಲಭೆಗಳನ್ನು ಕಂಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಒಂದಲ್ಲ ಒಂದು ಕೋಮುದ್ವೇಷ ಪ್ರಕರಣಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿರಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. “ಇದು ಯಾವುದೇ ಗಡಿರೇಖೆಗಳಿಲ್ಲದ ಬಯಲು ಭೂಮಿ. ನಾಳೆ ಮತ್ತು ಮರುದಿನ ಭೂಮಿಯನ್ನು ಬಳಸಲು ಸರ್ಕಾರಕ್ಕೆ ದಯವಿಟ್ಟು ಅನುಮತಿ ನೀಡಿ. ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ವಾದಿಸಿದರು.

ವಕ್ಫ್ ಮಂಡಳಿಯು ಈ ವಿಷಯವನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಕೋರಿತು. ದ್ವಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಅಭಿಪ್ರಾಯ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಸಮಸ್ಯೆಯನ್ನು ಮುಖ್ಯ ನ್ಯಾಯಮೂರ್ತಿಯವರಿಗೆ ಕಳುಹಿಸಿದರು. ಸಿಜೆಐ ಯುಯು ಲಲಿತ್ ಅವರು ತ್ರಿಸದಸ್ಯ ಪೀಠದ ಮುಂದೆ ಪಟ್ಟಿ ಮಾಡಿದರು. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಸಮಸ್ಯೆಯನ್ನು ಗಮನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...