Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

- Advertisement -
- Advertisement -

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ಸೂಚಿಸಿದೆ. ಇಲ್ಲಿ ಗಣೇಶ ಚತುರ್ಥಿ ನಡೆಸಬಾರದೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

“200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತು. ನ್ಯಾಯಾಲಯದ ತ್ರಿಸದಸ್ಯ ಪೀಠವು ‘ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಗಣೇಶ ಉತ್ಸವವನ್ನು ಆಚರಿಸಬಾರದು’ ಎಂದು ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮೈದಾನ ರಾಜ್ಯ ಸರ್ಕಾರಕ್ಕೆ ಸೇರಿದ್ದೋ ಅಥವಾ ವಕ್ಫ್ ಮಂಡಳಿಗೆ ಸೇರಿದ್ದೋ ಎಂಬ ವಿವಾದ ಹೈಕೋರ್ಟ್‌ನಲ್ಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಂಡಳಿಯ ವಕೀಲ ದುಶ್ಯಂತ್ ದವೆ, “ಧಾರ್ಮಿಕ ಅಲ್ಪಸಂಖ್ಯಾತ  ಹಕ್ಕುಗಳನ್ನು ಈ ರೀತಿ ತುಳಿಯಬಹುದು ಎಂಬ ಭಾವನೆಯನ್ನು ನೀಡಬೇಡಿ” ಎಂದು ಕೋರಿದರು.

“ಈ ಮೈದಾನದಲ್ಲಿ ಬೇರೆ ಯಾವುದೇ ಸಮುದಾಯದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದಿಲ್ಲ. ಇದನ್ನು ಕಾನೂನಿನ ಪ್ರಕಾರ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದ್ದಕ್ಕಿದ್ದಂತೆ ಇದು ವಿವಾದಿತ ಭೂಮಿ ಎಂದು ಪ್ರತಿಪಾದಿಸಲಾಗುತ್ತಿದೆ. ಗಣೇಶ ಚತುರ್ಥಿ ನಡೆಸಲು ಚಿಂತಿಸಲಾಗಿದೆ” ಎಂದು ವಕ್ಫ್‌ ತಿಳಿಸಿತು.

ಆದರೆ ಸರ್ಕಾರ ವಕೀಲರು ಎರಡು ದಿನ ಅವಕಾಶ ಕೋರಿದರು. ಈ ವೇಳೆ, ಮಂಡಳಿಯ ವಕೀಲರು, “ಬಾಬರಿ ಮಸೀದಿ ಪ್ರಕರಣದಲ್ಲಿ ಅಂದಿನ ಯುಪಿ ಸಿಎಂ ಕೂಡ ಭರವಸೆ ನೀಡಿದ್ದರು. ಅಲ್ಲಿ ಏನಾಯಿತು ಎಂದು ನಿಮಗೆ ತಿಳಿದಿದೆ” ಎಂದು 1992ರ ಮಸೀದಿ ಧ್ವಂಸವನ್ನು ಉಲ್ಲೇಖಿಸಿದರು.

ಇದಕ್ಕೂ ಮುನ್ನ ಮೈದಾನದಲ್ಲಿ ಇಂತಹ ಘಟನೆಗಳು ನಡೆದಿವೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಸರಕಾರಿ ವಕೀಲ ಮುಕುಲ್ ರೋಹಟಗಿ, ‘‘ಈಗ ಒಂದು ಕಾರ್ಯಕ್ರಮವನ್ನು ವಿರೋಧಿಸಲು ಅದು ಆಧಾರವಾಗುವುದಿಲ್ಲ. ಕಳೆದ 200 ವರ್ಷಗಳಿಂದ ಆಟದ ಮೈದಾನವಾಗಿ ಬಳಸಲಾಗುತ್ತಿತ್ತು. ಈ ಮೈದಾನ ಸರ್ಕಾರಕ್ಕೆ ಸೇರಿದೆ” ಎಂದರು.

“ದೆಹಲಿಯಲ್ಲಿ ದಸರಾ ವೇಳೆ ಪ್ರತಿಕೃತಿಗಳನ್ನು ಎಲ್ಲೆಂದರಲ್ಲಿ ದಹಿಸುತ್ತಾರೆ. ‘ಈ ಹಿಂದೂ ಹಬ್ಬವನ್ನು ಮಾಡಬೇಡಿ’ ಎಂದು ಜನರು ಹೇಳುತ್ತಾರೆಯೇ? ನಾವು ಸ್ವಲ್ಪ ವಿಶಾಲ ಮನೋಭಾವದಿಂದ ನೋಡಬೇಕು. ಗಣೇಶ ಚತುರ್ಥಿ ವೇಳೆ ಏನಾಗಲಿದೆ?” ಎಂದು ಪ್ರಶ್ನಿಸಿದರು.

ಆದರೆ ಮಂಡಳಿಯ ವಕೀಲ ದೇವ್, “ಈ ದೇಶದಲ್ಲಿ ಯಾವುದೇ ದೇವಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದರು.

“ವಕ್ಫ್ ಕಾಯಿದೆ 1995 ಪ್ರಕಾರ ಸರ್ಕಾರಿ ಸಂಸ್ಥೆಗಳು ವಶಪಡಿಸಿಕೊಂಡಿರುವ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕಾಗುತ್ತದೆ. ಈ ಆಸ್ತಿಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸ್ಥೆಯ ಒಡೆತನದ ಜಾಗದಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಯೋಚಿಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. “ಮುಂದಿನ ವರ್ಷ ಚುನಾವಣೆ ಇರುವುದರಿಂದ ಇದನ್ನು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ಬಿಬಿಎಂಪಿ ಚುನಾವಣೆ 2023ಕ್ಕೆ ನಡೆಯಲಿದೆ” ಎಂದು ಬೋರ್ಡ್ ಗಮನ ಸೆಳೆಯಿತು.

ಮಂಡಳಿಯ ವಕೀಲರಾದ ಕಪಿಲ್ ಸಿಬಲ್, ಆಗಸ್ಟ್ 9 ರಂದು ದಾಖಲಾಗಿರುವ ಎಫ್‌ಐಆರ್‌ ಉಲ್ಲೇಖಿಸಿದರು. “ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ವಿವಾದವಿದೆ (ಮತ್ತು) ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ದೂರು ದಾಖಲಾಗಿದೆ. ದೂರಿನಲ್ಲಿ ಬಾಬರಿ ಮಸೀದಿಯ ಬಗ್ಗೆ ಕೆಲವು ಉಲ್ಲೇಖಗಳನ್ನು ಮಾಡಿರುವುದು ತುಂಬಾ ಗೊಂದಲದ ಸಂಗತಿ” ಎಂದು ಅವರು ತಿಳಿಸಿದರು.

ಅಲ್ಲಿ ಉತ್ಸವ ಮಾಡಲು ಸರ್ಕಾರ ಅನುಮತಿ ನೀಡುವುದನ್ನು ಕೋರ್ಟ್ ಒಪ್ಪಲಿಲ್ಲ. ಕರ್ನಾಟಕವು ಇತ್ತೀಚಿನ ತಿಂಗಳುಗಳಲ್ಲಿ ಕೆಲವು ಕೋಮುಗಲಭೆಗಳನ್ನು ಕಂಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಒಂದಲ್ಲ ಒಂದು ಕೋಮುದ್ವೇಷ ಪ್ರಕರಣಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿರಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. “ಇದು ಯಾವುದೇ ಗಡಿರೇಖೆಗಳಿಲ್ಲದ ಬಯಲು ಭೂಮಿ. ನಾಳೆ ಮತ್ತು ಮರುದಿನ ಭೂಮಿಯನ್ನು ಬಳಸಲು ಸರ್ಕಾರಕ್ಕೆ ದಯವಿಟ್ಟು ಅನುಮತಿ ನೀಡಿ. ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ವಾದಿಸಿದರು.

ವಕ್ಫ್ ಮಂಡಳಿಯು ಈ ವಿಷಯವನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಕೋರಿತು. ದ್ವಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಅಭಿಪ್ರಾಯ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಸಮಸ್ಯೆಯನ್ನು ಮುಖ್ಯ ನ್ಯಾಯಮೂರ್ತಿಯವರಿಗೆ ಕಳುಹಿಸಿದರು. ಸಿಜೆಐ ಯುಯು ಲಲಿತ್ ಅವರು ತ್ರಿಸದಸ್ಯ ಪೀಠದ ಮುಂದೆ ಪಟ್ಟಿ ಮಾಡಿದರು. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಸಮಸ್ಯೆಯನ್ನು ಗಮನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...