Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

- Advertisement -
- Advertisement -

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ಸೂಚಿಸಿದೆ. ಇಲ್ಲಿ ಗಣೇಶ ಚತುರ್ಥಿ ನಡೆಸಬಾರದೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

“200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತು. ನ್ಯಾಯಾಲಯದ ತ್ರಿಸದಸ್ಯ ಪೀಠವು ‘ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಗಣೇಶ ಉತ್ಸವವನ್ನು ಆಚರಿಸಬಾರದು’ ಎಂದು ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮೈದಾನ ರಾಜ್ಯ ಸರ್ಕಾರಕ್ಕೆ ಸೇರಿದ್ದೋ ಅಥವಾ ವಕ್ಫ್ ಮಂಡಳಿಗೆ ಸೇರಿದ್ದೋ ಎಂಬ ವಿವಾದ ಹೈಕೋರ್ಟ್‌ನಲ್ಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಂಡಳಿಯ ವಕೀಲ ದುಶ್ಯಂತ್ ದವೆ, “ಧಾರ್ಮಿಕ ಅಲ್ಪಸಂಖ್ಯಾತ  ಹಕ್ಕುಗಳನ್ನು ಈ ರೀತಿ ತುಳಿಯಬಹುದು ಎಂಬ ಭಾವನೆಯನ್ನು ನೀಡಬೇಡಿ” ಎಂದು ಕೋರಿದರು.

“ಈ ಮೈದಾನದಲ್ಲಿ ಬೇರೆ ಯಾವುದೇ ಸಮುದಾಯದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದಿಲ್ಲ. ಇದನ್ನು ಕಾನೂನಿನ ಪ್ರಕಾರ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದ್ದಕ್ಕಿದ್ದಂತೆ ಇದು ವಿವಾದಿತ ಭೂಮಿ ಎಂದು ಪ್ರತಿಪಾದಿಸಲಾಗುತ್ತಿದೆ. ಗಣೇಶ ಚತುರ್ಥಿ ನಡೆಸಲು ಚಿಂತಿಸಲಾಗಿದೆ” ಎಂದು ವಕ್ಫ್‌ ತಿಳಿಸಿತು.

ಆದರೆ ಸರ್ಕಾರ ವಕೀಲರು ಎರಡು ದಿನ ಅವಕಾಶ ಕೋರಿದರು. ಈ ವೇಳೆ, ಮಂಡಳಿಯ ವಕೀಲರು, “ಬಾಬರಿ ಮಸೀದಿ ಪ್ರಕರಣದಲ್ಲಿ ಅಂದಿನ ಯುಪಿ ಸಿಎಂ ಕೂಡ ಭರವಸೆ ನೀಡಿದ್ದರು. ಅಲ್ಲಿ ಏನಾಯಿತು ಎಂದು ನಿಮಗೆ ತಿಳಿದಿದೆ” ಎಂದು 1992ರ ಮಸೀದಿ ಧ್ವಂಸವನ್ನು ಉಲ್ಲೇಖಿಸಿದರು.

ಇದಕ್ಕೂ ಮುನ್ನ ಮೈದಾನದಲ್ಲಿ ಇಂತಹ ಘಟನೆಗಳು ನಡೆದಿವೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಸರಕಾರಿ ವಕೀಲ ಮುಕುಲ್ ರೋಹಟಗಿ, ‘‘ಈಗ ಒಂದು ಕಾರ್ಯಕ್ರಮವನ್ನು ವಿರೋಧಿಸಲು ಅದು ಆಧಾರವಾಗುವುದಿಲ್ಲ. ಕಳೆದ 200 ವರ್ಷಗಳಿಂದ ಆಟದ ಮೈದಾನವಾಗಿ ಬಳಸಲಾಗುತ್ತಿತ್ತು. ಈ ಮೈದಾನ ಸರ್ಕಾರಕ್ಕೆ ಸೇರಿದೆ” ಎಂದರು.

“ದೆಹಲಿಯಲ್ಲಿ ದಸರಾ ವೇಳೆ ಪ್ರತಿಕೃತಿಗಳನ್ನು ಎಲ್ಲೆಂದರಲ್ಲಿ ದಹಿಸುತ್ತಾರೆ. ‘ಈ ಹಿಂದೂ ಹಬ್ಬವನ್ನು ಮಾಡಬೇಡಿ’ ಎಂದು ಜನರು ಹೇಳುತ್ತಾರೆಯೇ? ನಾವು ಸ್ವಲ್ಪ ವಿಶಾಲ ಮನೋಭಾವದಿಂದ ನೋಡಬೇಕು. ಗಣೇಶ ಚತುರ್ಥಿ ವೇಳೆ ಏನಾಗಲಿದೆ?” ಎಂದು ಪ್ರಶ್ನಿಸಿದರು.

ಆದರೆ ಮಂಡಳಿಯ ವಕೀಲ ದೇವ್, “ಈ ದೇಶದಲ್ಲಿ ಯಾವುದೇ ದೇವಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದರು.

“ವಕ್ಫ್ ಕಾಯಿದೆ 1995 ಪ್ರಕಾರ ಸರ್ಕಾರಿ ಸಂಸ್ಥೆಗಳು ವಶಪಡಿಸಿಕೊಂಡಿರುವ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕಾಗುತ್ತದೆ. ಈ ಆಸ್ತಿಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸ್ಥೆಯ ಒಡೆತನದ ಜಾಗದಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಯೋಚಿಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. “ಮುಂದಿನ ವರ್ಷ ಚುನಾವಣೆ ಇರುವುದರಿಂದ ಇದನ್ನು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ಬಿಬಿಎಂಪಿ ಚುನಾವಣೆ 2023ಕ್ಕೆ ನಡೆಯಲಿದೆ” ಎಂದು ಬೋರ್ಡ್ ಗಮನ ಸೆಳೆಯಿತು.

ಮಂಡಳಿಯ ವಕೀಲರಾದ ಕಪಿಲ್ ಸಿಬಲ್, ಆಗಸ್ಟ್ 9 ರಂದು ದಾಖಲಾಗಿರುವ ಎಫ್‌ಐಆರ್‌ ಉಲ್ಲೇಖಿಸಿದರು. “ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ವಿವಾದವಿದೆ (ಮತ್ತು) ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ದೂರು ದಾಖಲಾಗಿದೆ. ದೂರಿನಲ್ಲಿ ಬಾಬರಿ ಮಸೀದಿಯ ಬಗ್ಗೆ ಕೆಲವು ಉಲ್ಲೇಖಗಳನ್ನು ಮಾಡಿರುವುದು ತುಂಬಾ ಗೊಂದಲದ ಸಂಗತಿ” ಎಂದು ಅವರು ತಿಳಿಸಿದರು.

ಅಲ್ಲಿ ಉತ್ಸವ ಮಾಡಲು ಸರ್ಕಾರ ಅನುಮತಿ ನೀಡುವುದನ್ನು ಕೋರ್ಟ್ ಒಪ್ಪಲಿಲ್ಲ. ಕರ್ನಾಟಕವು ಇತ್ತೀಚಿನ ತಿಂಗಳುಗಳಲ್ಲಿ ಕೆಲವು ಕೋಮುಗಲಭೆಗಳನ್ನು ಕಂಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಒಂದಲ್ಲ ಒಂದು ಕೋಮುದ್ವೇಷ ಪ್ರಕರಣಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿರಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. “ಇದು ಯಾವುದೇ ಗಡಿರೇಖೆಗಳಿಲ್ಲದ ಬಯಲು ಭೂಮಿ. ನಾಳೆ ಮತ್ತು ಮರುದಿನ ಭೂಮಿಯನ್ನು ಬಳಸಲು ಸರ್ಕಾರಕ್ಕೆ ದಯವಿಟ್ಟು ಅನುಮತಿ ನೀಡಿ. ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ವಾದಿಸಿದರು.

ವಕ್ಫ್ ಮಂಡಳಿಯು ಈ ವಿಷಯವನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಕೋರಿತು. ದ್ವಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಅಭಿಪ್ರಾಯ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಸಮಸ್ಯೆಯನ್ನು ಮುಖ್ಯ ನ್ಯಾಯಮೂರ್ತಿಯವರಿಗೆ ಕಳುಹಿಸಿದರು. ಸಿಜೆಐ ಯುಯು ಲಲಿತ್ ಅವರು ತ್ರಿಸದಸ್ಯ ಪೀಠದ ಮುಂದೆ ಪಟ್ಟಿ ಮಾಡಿದರು. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಸಮಸ್ಯೆಯನ್ನು ಗಮನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...