Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ನಡೆಸುವಂತಿಲ್ಲ: ಸುಪ್ರೀಂ ಆದೇಶ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ

- Advertisement -
- Advertisement -

ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ‘ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ’ ಕಾಪಾಡಬೇಕು ಎಂದು ಸೂಚಿಸಿದೆ. ಇಲ್ಲಿ ಗಣೇಶ ಚತುರ್ಥಿ ನಡೆಸಬಾರದೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ಗಣೇಶ ಹಬ್ಬವನ್ನು ಇಲ್ಲಿ ಆಚರಿಸಲು ಸರ್ಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಕ್ಫ್‌ ಬೋರ್ಡ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

“200 ವರ್ಷಗಳಿಂದ ಈ ಸ್ಥಳದಲ್ಲಿ ಇಂತಹ ಧಾರ್ಮಿಕ ಉತ್ಸವಗಳನ್ನು ನಡೆಸಿಲ್ಲ” ಎಂದು ವಕ್ಫ್‌ ಮಂಡಳಿ ವಾದಿಸಿತು. ನ್ಯಾಯಾಲಯದ ತ್ರಿಸದಸ್ಯ ಪೀಠವು ‘ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ಗಣೇಶ ಉತ್ಸವವನ್ನು ಆಚರಿಸಬಾರದು’ ಎಂದು ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮೈದಾನ ರಾಜ್ಯ ಸರ್ಕಾರಕ್ಕೆ ಸೇರಿದ್ದೋ ಅಥವಾ ವಕ್ಫ್ ಮಂಡಳಿಗೆ ಸೇರಿದ್ದೋ ಎಂಬ ವಿವಾದ ಹೈಕೋರ್ಟ್‌ನಲ್ಲಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಂಡಳಿಯ ವಕೀಲ ದುಶ್ಯಂತ್ ದವೆ, “ಧಾರ್ಮಿಕ ಅಲ್ಪಸಂಖ್ಯಾತ  ಹಕ್ಕುಗಳನ್ನು ಈ ರೀತಿ ತುಳಿಯಬಹುದು ಎಂಬ ಭಾವನೆಯನ್ನು ನೀಡಬೇಡಿ” ಎಂದು ಕೋರಿದರು.

“ಈ ಮೈದಾನದಲ್ಲಿ ಬೇರೆ ಯಾವುದೇ ಸಮುದಾಯದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದಿಲ್ಲ. ಇದನ್ನು ಕಾನೂನಿನ ಪ್ರಕಾರ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದ್ದಕ್ಕಿದ್ದಂತೆ ಇದು ವಿವಾದಿತ ಭೂಮಿ ಎಂದು ಪ್ರತಿಪಾದಿಸಲಾಗುತ್ತಿದೆ. ಗಣೇಶ ಚತುರ್ಥಿ ನಡೆಸಲು ಚಿಂತಿಸಲಾಗಿದೆ” ಎಂದು ವಕ್ಫ್‌ ತಿಳಿಸಿತು.

ಆದರೆ ಸರ್ಕಾರ ವಕೀಲರು ಎರಡು ದಿನ ಅವಕಾಶ ಕೋರಿದರು. ಈ ವೇಳೆ, ಮಂಡಳಿಯ ವಕೀಲರು, “ಬಾಬರಿ ಮಸೀದಿ ಪ್ರಕರಣದಲ್ಲಿ ಅಂದಿನ ಯುಪಿ ಸಿಎಂ ಕೂಡ ಭರವಸೆ ನೀಡಿದ್ದರು. ಅಲ್ಲಿ ಏನಾಯಿತು ಎಂದು ನಿಮಗೆ ತಿಳಿದಿದೆ” ಎಂದು 1992ರ ಮಸೀದಿ ಧ್ವಂಸವನ್ನು ಉಲ್ಲೇಖಿಸಿದರು.

ಇದಕ್ಕೂ ಮುನ್ನ ಮೈದಾನದಲ್ಲಿ ಇಂತಹ ಘಟನೆಗಳು ನಡೆದಿವೆಯೇ ಎಂದು ನ್ಯಾಯಾಲಯ ಪ್ರಶ್ನಿಸಿದಾಗ, ಸರಕಾರಿ ವಕೀಲ ಮುಕುಲ್ ರೋಹಟಗಿ, ‘‘ಈಗ ಒಂದು ಕಾರ್ಯಕ್ರಮವನ್ನು ವಿರೋಧಿಸಲು ಅದು ಆಧಾರವಾಗುವುದಿಲ್ಲ. ಕಳೆದ 200 ವರ್ಷಗಳಿಂದ ಆಟದ ಮೈದಾನವಾಗಿ ಬಳಸಲಾಗುತ್ತಿತ್ತು. ಈ ಮೈದಾನ ಸರ್ಕಾರಕ್ಕೆ ಸೇರಿದೆ” ಎಂದರು.

“ದೆಹಲಿಯಲ್ಲಿ ದಸರಾ ವೇಳೆ ಪ್ರತಿಕೃತಿಗಳನ್ನು ಎಲ್ಲೆಂದರಲ್ಲಿ ದಹಿಸುತ್ತಾರೆ. ‘ಈ ಹಿಂದೂ ಹಬ್ಬವನ್ನು ಮಾಡಬೇಡಿ’ ಎಂದು ಜನರು ಹೇಳುತ್ತಾರೆಯೇ? ನಾವು ಸ್ವಲ್ಪ ವಿಶಾಲ ಮನೋಭಾವದಿಂದ ನೋಡಬೇಕು. ಗಣೇಶ ಚತುರ್ಥಿ ವೇಳೆ ಏನಾಗಲಿದೆ?” ಎಂದು ಪ್ರಶ್ನಿಸಿದರು.

ಆದರೆ ಮಂಡಳಿಯ ವಕೀಲ ದೇವ್, “ಈ ದೇಶದಲ್ಲಿ ಯಾವುದೇ ದೇವಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ನಾನು ಆಶ್ಚರ್ಯ ಪಡುತ್ತೇನೆ” ಎಂದರು.

“ವಕ್ಫ್ ಕಾಯಿದೆ 1995 ಪ್ರಕಾರ ಸರ್ಕಾರಿ ಸಂಸ್ಥೆಗಳು ವಶಪಡಿಸಿಕೊಂಡಿರುವ ಯಾವುದೇ ವಕ್ಫ್ ಆಸ್ತಿಯನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಬೇಕಾಗುತ್ತದೆ. ಈ ಆಸ್ತಿಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸ್ಥೆಯ ಒಡೆತನದ ಜಾಗದಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಯೋಚಿಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. “ಮುಂದಿನ ವರ್ಷ ಚುನಾವಣೆ ಇರುವುದರಿಂದ ಇದನ್ನು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ಬಿಬಿಎಂಪಿ ಚುನಾವಣೆ 2023ಕ್ಕೆ ನಡೆಯಲಿದೆ” ಎಂದು ಬೋರ್ಡ್ ಗಮನ ಸೆಳೆಯಿತು.

ಮಂಡಳಿಯ ವಕೀಲರಾದ ಕಪಿಲ್ ಸಿಬಲ್, ಆಗಸ್ಟ್ 9 ರಂದು ದಾಖಲಾಗಿರುವ ಎಫ್‌ಐಆರ್‌ ಉಲ್ಲೇಖಿಸಿದರು. “ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ವಿವಾದವಿದೆ (ಮತ್ತು) ಈ ಜಮೀನು ಕಂದಾಯ ಇಲಾಖೆಗೆ ಸೇರಿದೆ ಎಂದು ದೂರು ದಾಖಲಾಗಿದೆ. ದೂರಿನಲ್ಲಿ ಬಾಬರಿ ಮಸೀದಿಯ ಬಗ್ಗೆ ಕೆಲವು ಉಲ್ಲೇಖಗಳನ್ನು ಮಾಡಿರುವುದು ತುಂಬಾ ಗೊಂದಲದ ಸಂಗತಿ” ಎಂದು ಅವರು ತಿಳಿಸಿದರು.

ಅಲ್ಲಿ ಉತ್ಸವ ಮಾಡಲು ಸರ್ಕಾರ ಅನುಮತಿ ನೀಡುವುದನ್ನು ಕೋರ್ಟ್ ಒಪ್ಪಲಿಲ್ಲ. ಕರ್ನಾಟಕವು ಇತ್ತೀಚಿನ ತಿಂಗಳುಗಳಲ್ಲಿ ಕೆಲವು ಕೋಮುಗಲಭೆಗಳನ್ನು ಕಂಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಒಂದಲ್ಲ ಒಂದು ಕೋಮುದ್ವೇಷ ಪ್ರಕರಣಗಳಿಗೆ ರಾಜ್ಯ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿರಿ: ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ!

ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. “ಇದು ಯಾವುದೇ ಗಡಿರೇಖೆಗಳಿಲ್ಲದ ಬಯಲು ಭೂಮಿ. ನಾಳೆ ಮತ್ತು ಮರುದಿನ ಭೂಮಿಯನ್ನು ಬಳಸಲು ಸರ್ಕಾರಕ್ಕೆ ದಯವಿಟ್ಟು ಅನುಮತಿ ನೀಡಿ. ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ವಾದಿಸಿದರು.

ವಕ್ಫ್ ಮಂಡಳಿಯು ಈ ವಿಷಯವನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಕೋರಿತು. ದ್ವಿಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಅಭಿಪ್ರಾಯ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿ ಸಮಸ್ಯೆಯನ್ನು ಮುಖ್ಯ ನ್ಯಾಯಮೂರ್ತಿಯವರಿಗೆ ಕಳುಹಿಸಿದರು. ಸಿಜೆಐ ಯುಯು ಲಲಿತ್ ಅವರು ತ್ರಿಸದಸ್ಯ ಪೀಠದ ಮುಂದೆ ಪಟ್ಟಿ ಮಾಡಿದರು. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಸಮಸ್ಯೆಯನ್ನು ಗಮನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...