Homeಮುಖಪುಟಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

- Advertisement -
- Advertisement -

ಹರಿಯಾಣದ ಬಿಜೆಪಿ ಸರ್ಕಾರದ ಸಚಿವ ಅನಿಲ್ ವಿಜ್ ಭಾನುವಾರ ತಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಅವರ ರಾಜೀನಾಮೆಗೆ ಮತ್ತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು ಸೆಕ್ಷನ್ 376D [ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್] ಅಡಿಯಲ್ಲಿ ಆರೋಪಿಯಾಗಿದ್ದಾರೆ,” ಎಂದು ವಿಜ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷನಿಂದ

“ಅಂತಹ ವ್ಯಕ್ತಿ ಮಹಿಳೆಯರ ಸಭೆಯ ಅಧ್ಯಕ್ಷತೆಯನ್ನು ಹೇಗೆ ವಹಿಸಲು ಸಾಧ್ಯ? ಪಕ್ಷದ ತತ್ವಗಳನ್ನು ಎತ್ತಿಹಿಡಿಯಲು, ಅವರು ತಕ್ಷಣವೇ ರಾಜೀನಾಮೆ ನೀಡಬೇಕು.” ಎಂದು ಸಚಿವ ವಿಜ್ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರ್ಮಿಕ, ಇಂಧನ ಮತ್ತು ಸಾರಿಗೆ ಖಾತೆಗಳನ್ನು ಹೊಂದಿರುವ ವಿಜ್, “ಆಡ್ವಾಣಿ ಜಿ ಅವರಂತಹ ನಮ್ಮ ಹಿರಿಯ ನಾಯಕರು ಸಹ ಅವರ ವಿರುದ್ಧ ಆರೋಪಗಳು ಬಂದಾಗ ರಾಜೀನಾಮೆ ನೀಡಿದ್ದರು. ಅವರು ಅವರಿಗಿಂತ ಮೇಲಲ್ಲ.” ಎಂದು ಹೇಳಿದ್ದಾರೆ.

ಬಡೋಲಿ ಮತ್ತು ಗಾಯಕ ರಾಕಿ ಮಿತ್ತಲ್ ಅವರ ವಿರುದ್ಧ ಡಿಸೆಂಬರ್‌ನಲ್ಲಿ ಹಿಮಾಚಲ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಆದರೆ ಇಬ್ಬರೂ ಆರೋಪಗಳನ್ನು ನಿರಾಕರಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಜುಲೈನಲ್ಲಿ ಬಡೋಲಿ ಹರಿಯಾಣ ಬಿಜೆಪಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. 2019 ರಿಂದ ಅಕ್ಟೋಬರ್ 2024 ರವರೆಗೆ ರಾಯ್ ಕ್ಷೇತ್ರದ ಶಾಸಕರಾಗಿದ್ದ ಅವರು, ಜೂನ್‌ನಲ್ಲಿ ಸೋನಿಪತ್‌ನಿಂದ ಲೋಕಸಭಾ ಚುನಾವಣೆಯಲ್ಲಿ ಸೋತರು. ಆದರೆ, ಗಾಯಕ ಮಿತ್ತಲ್ ಆಗಸ್ಟ್‌ನಲ್ಲಿ ಕಾಂಗ್ರೆಸ್ ಸೇರಿದ್ದರು.

ಅತ್ಯಾಚಾರ ಪ್ರಕರಣದ ಬಗ್ಗೆ ಜನವರಿ 18 ರಂದು ಪ್ರತಿಕ್ರಿಯಿಸಿದ್ದ ಸಚಿವ ವಿಜ್, ಬದೋಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿದ್ದರು. “ಹಿಮಾಚಲ ಪ್ರದೇಶ ಪೊಲೀಸರ ತನಿಖೆಯಲ್ಲಿ ಅವರು ನಿರಪರಾಧಿ ಎಂದು ಸಾಬೀತುಪಡಿಸುತ್ತಾರೆ ಎಂದು ನಾನು ನಂಬುತ್ತೇನೆ. ಆದಾಗ್ಯೂ, ಅಲ್ಲಿಯವರೆಗೆ, ಪಕ್ಷದ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು, ಅವರು ಈ ಹುದ್ದೆಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಬೇಕು.” ಎಂದು ಅವರು ಹೇಳಿದ್ದರು.

ಇದನ್ನೂಓದಿ:  ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...