Homeಮುಖಪುಟಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

- Advertisement -
- Advertisement -

ಹರಿಯಾಣದ ಬಿಜೆಪಿ ಸರ್ಕಾರದ ಸಚಿವ ಅನಿಲ್ ವಿಜ್ ಭಾನುವಾರ ತಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಅವರ ರಾಜೀನಾಮೆಗೆ ಮತ್ತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು ಸೆಕ್ಷನ್ 376D [ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್] ಅಡಿಯಲ್ಲಿ ಆರೋಪಿಯಾಗಿದ್ದಾರೆ,” ಎಂದು ವಿಜ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷನಿಂದ

“ಅಂತಹ ವ್ಯಕ್ತಿ ಮಹಿಳೆಯರ ಸಭೆಯ ಅಧ್ಯಕ್ಷತೆಯನ್ನು ಹೇಗೆ ವಹಿಸಲು ಸಾಧ್ಯ? ಪಕ್ಷದ ತತ್ವಗಳನ್ನು ಎತ್ತಿಹಿಡಿಯಲು, ಅವರು ತಕ್ಷಣವೇ ರಾಜೀನಾಮೆ ನೀಡಬೇಕು.” ಎಂದು ಸಚಿವ ವಿಜ್ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾರ್ಮಿಕ, ಇಂಧನ ಮತ್ತು ಸಾರಿಗೆ ಖಾತೆಗಳನ್ನು ಹೊಂದಿರುವ ವಿಜ್, “ಆಡ್ವಾಣಿ ಜಿ ಅವರಂತಹ ನಮ್ಮ ಹಿರಿಯ ನಾಯಕರು ಸಹ ಅವರ ವಿರುದ್ಧ ಆರೋಪಗಳು ಬಂದಾಗ ರಾಜೀನಾಮೆ ನೀಡಿದ್ದರು. ಅವರು ಅವರಿಗಿಂತ ಮೇಲಲ್ಲ.” ಎಂದು ಹೇಳಿದ್ದಾರೆ.

ಬಡೋಲಿ ಮತ್ತು ಗಾಯಕ ರಾಕಿ ಮಿತ್ತಲ್ ಅವರ ವಿರುದ್ಧ ಡಿಸೆಂಬರ್‌ನಲ್ಲಿ ಹಿಮಾಚಲ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಆದರೆ ಇಬ್ಬರೂ ಆರೋಪಗಳನ್ನು ನಿರಾಕರಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಜುಲೈನಲ್ಲಿ ಬಡೋಲಿ ಹರಿಯಾಣ ಬಿಜೆಪಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. 2019 ರಿಂದ ಅಕ್ಟೋಬರ್ 2024 ರವರೆಗೆ ರಾಯ್ ಕ್ಷೇತ್ರದ ಶಾಸಕರಾಗಿದ್ದ ಅವರು, ಜೂನ್‌ನಲ್ಲಿ ಸೋನಿಪತ್‌ನಿಂದ ಲೋಕಸಭಾ ಚುನಾವಣೆಯಲ್ಲಿ ಸೋತರು. ಆದರೆ, ಗಾಯಕ ಮಿತ್ತಲ್ ಆಗಸ್ಟ್‌ನಲ್ಲಿ ಕಾಂಗ್ರೆಸ್ ಸೇರಿದ್ದರು.

ಅತ್ಯಾಚಾರ ಪ್ರಕರಣದ ಬಗ್ಗೆ ಜನವರಿ 18 ರಂದು ಪ್ರತಿಕ್ರಿಯಿಸಿದ್ದ ಸಚಿವ ವಿಜ್, ಬದೋಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿದ್ದರು. “ಹಿಮಾಚಲ ಪ್ರದೇಶ ಪೊಲೀಸರ ತನಿಖೆಯಲ್ಲಿ ಅವರು ನಿರಪರಾಧಿ ಎಂದು ಸಾಬೀತುಪಡಿಸುತ್ತಾರೆ ಎಂದು ನಾನು ನಂಬುತ್ತೇನೆ. ಆದಾಗ್ಯೂ, ಅಲ್ಲಿಯವರೆಗೆ, ಪಕ್ಷದ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು, ಅವರು ಈ ಹುದ್ದೆಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಬೇಕು.” ಎಂದು ಅವರು ಹೇಳಿದ್ದರು.

ಇದನ್ನೂಓದಿ:  ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...