Homeಮುಖಪುಟಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

- Advertisement -
- Advertisement -

2018ರಲ್ಲಿ ಮಧ್ಯಪ್ರದೇಶದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ ನೀಡಲಾಗಿದ್ದ ಮರಣದಂಡನೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಕಳೆದ ವರ್ಷ ಮಧ್ಯಪ್ರದೇಶ ಹೈಕೋರ್ಟ್ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ 2018ರ ಆಗಸ್ಟ್‌‌ನಲ್ಲಿ ತೀರ್ಪು ನೀಡಿತ್ತು. ಹೈಕೋರ್ಟ್ ಅದೇಶದ ವಿರುದ್ದ ಅಪರಾಧಿ 2021ರ ಸೆಪ್ಟೆಂಬರ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದನು.
ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಪೀಠವು, ಮುಂದಿನ ಪರಿಗಣನೆಗೆ ಬಾಕಿಯಿದ್ದು, ಅಪರಾಧಿಗೆ ನೀಡಲಾದ ಮರಣದಂಡನೆಯ ಕಾರ್ಯಾಚರಣೆಯನ್ನು ತಡೆಹಿಡಿಯಲಾಗುವುದು ಎಂದು ಹೇಳಿದೆ.

ಅಪರಾಧಿಯ ಮಾನಸಿಕ ದೃಢತೆಯ ಮೌಲ್ಯಮಾಪನ ವರದಿಯನ್ನು ಪೀಠದ ಮುಂದೆ ಇಡಬೇಕು. ಮೇಲ್ಮನವಿದಾರ ಜೈಲಿನಲ್ಲಿದ್ದಾಗ ಆತನ ಕೆಲಸದ ಸ್ವರೂಪದ ಬಗ್ಗೆ ಜೈಲು ಆಡಳಿತದ ವರದಿಯನ್ನು ಸಹ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಹೆಚ್ಚಿನ ಪರಿಗಣನೆಗೆ ಬಾಕಿ ಇದೆ, ಮೇಲ್ಮನವಿದಾರರಿಗೆ ನೀಡಲಾದ ಮರಣದಂಡನೆಯ ಪರಿಣಾಮ ಮತ್ತು ಕಾರ್ಯಾಚರಣೆಯನ್ನು ತಡೆಹಿಡಿಯಲಾಗುತ್ತದೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಕಾರಾಗೃಹಕ್ಕೆ ಸೂಚನೆಯನ್ನು ಕಳುಹಿಸಬೇಕು” ಎಂದು ನ್ಯಾಯಮೂರ್ತಿಗಳಾದ ಎಸ್.ಆರ್.ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠವು ಫೆ. 14ರದು ನೀಡಿದ ಆದೇಶದಲ್ಲಿ ಹೇಳಿದೆ.

ಮುಂದಿನ ವಿಚಾರಣೆಯು ಮಾರ್ಚ್ 22ಕ್ಕೆ ನಡೆಯಲಿದ್ದು, ಅದಕ್ಕೂ ಮೊದಲೇ, ಮಧ್ಯಪ್ರದೇಶ ಸರ್ಕಾರವು ಮೇಲ್ಮನವಿದಾರರಿಗೆ ಸಂಬಂಧಿಸಿದ ಎಲ್ಲಾ ಪರೀಕ್ಷಾಧಿಕಾರಿಗಳ ವರದಿಗಳನ್ನು ತನ್ನ ಮುಂದೆ ಇಡಬೇಕು ಎಂದು ಪೀಠ ಸೂಚಿಸಿದೆ.

“ನ್ಯಾಯದ ಹಿತಾಸಕ್ತಿಯಿಂದ ನಾವು ಮೇಲ್ಮನವಿದಾರರ ಮಾನಸಿಕ ದೃಢತೆಯ ಪರೀಕ್ಷಾ ವರದಿಯನ್ನು ಪಡೆಯಬೇಕೆಂದು ನಾವು ಭಾವಿಸುತ್ತೇವೆ. ಮಧ್ಯಪ್ರದೇಶದ ಇಂಧೋರ್ ಜಿಲ್ಲಾ ಮೆಂಟಲ್ ಕೇರ್ ಆಸ್ಪತ್ರೆಯ ನಿರ್ದೇಶಕರು ಅಪರಾಧಿ (ಅರ್ಜಿದಾರ)ಯ ಮಾನಸಿಕ ಮೌಲ್ಯಮಾಪನಕ್ಕಾಗಿ ಸೂಕ್ತ ತಂಡವನ್ನು ರಚಿಸುವಂತೆ ನಾವು ನಿರ್ದೇಶಿಸುತ್ತೇವೆ. ಅವರು ಮುಂದಿನ ವಿಚಾರಣೆಗೂ ಮೊದಲೇ ವರದಿಯನ್ನು ಪೀಠದ ಮುಂದೆ ಇರಿಸಬೇಕು” ಎಂದು ಸುಪ್ರೀಂ ತಿಳಿಸಿದೆ.

ಅದೇ ರೀತಿಯಲ್ಲಿ, ಅರ್ಜಿದಾರ ಅಪರಾಧಿಯನ್ನು ಪ್ರಸ್ತುತ ಇರಿಸಲಾಗಿರುವ ಜೈಲಿನ ಅಧಿಕಾರಿಗಳು ಎಲ್ಲಾ ರೀತಿಯಲ್ಲೂ ಅಪರಾಧಿಯ ಪ್ರವೇಶ, ನಡತೆಗಳ ಬಗ್ಗೆ ಮೌಲ್ಯಮಾಪನ ನಡೆಸಲು ಅನುಕೂಲವಾಗುವಂತೆ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಸುಪ್ರೀಂ ನಿರ್ದೇಶಿಸಿದೆ.

ಜೂನ್ 2018 ರಲ್ಲಿ, ಶಾಲಾ ತರಗತಿಗಳನ್ನು ಮುಗಿಸಿ ಹೊರಬಂದ ಬಾಲಕಿ ಶಾಲಾ ಆವರಣದಿಂದ ಕಾಣೆಯಾಗಿದ್ದಳು ಎಂದು ಮಂದಸೌರ್ನ ಪೊಲೀಸ್ ಠಾಣೆಯಲ್ಲಿ ಹುಡುಗಿಯ ಅಜ್ಜಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಮರುದಿನ ಬಾಲಕಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗಿದೆ. ತನ್ನನ್ನು ಅಪರಾಧಿಗಳು ನಿರ್ಜನ ಪ್ರದೇಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯನ್ನು ಬಾಲಕಿ ಪೊಲೀಸರಿಗೆ ವಿವರಿಸಿದ್ದಳು.

ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ಬಳಿಕ ವಿಚಾರಣಾ ನ್ಯಾಯಾಲಯ ಇಬ್ಬರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...