Homeಮುಖಪುಟಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗೆ ಮರಣದಂಡನೆ ಜಾರಿಗೆ ಸುಪ್ರೀಂ ತಡೆ

- Advertisement -
- Advertisement -

2018ರಲ್ಲಿ ಮಧ್ಯಪ್ರದೇಶದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ ನೀಡಲಾಗಿದ್ದ ಮರಣದಂಡನೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಕಳೆದ ವರ್ಷ ಮಧ್ಯಪ್ರದೇಶ ಹೈಕೋರ್ಟ್ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ 2018ರ ಆಗಸ್ಟ್‌‌ನಲ್ಲಿ ತೀರ್ಪು ನೀಡಿತ್ತು. ಹೈಕೋರ್ಟ್ ಅದೇಶದ ವಿರುದ್ದ ಅಪರಾಧಿ 2021ರ ಸೆಪ್ಟೆಂಬರ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದನು.
ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಪೀಠವು, ಮುಂದಿನ ಪರಿಗಣನೆಗೆ ಬಾಕಿಯಿದ್ದು, ಅಪರಾಧಿಗೆ ನೀಡಲಾದ ಮರಣದಂಡನೆಯ ಕಾರ್ಯಾಚರಣೆಯನ್ನು ತಡೆಹಿಡಿಯಲಾಗುವುದು ಎಂದು ಹೇಳಿದೆ.

ಅಪರಾಧಿಯ ಮಾನಸಿಕ ದೃಢತೆಯ ಮೌಲ್ಯಮಾಪನ ವರದಿಯನ್ನು ಪೀಠದ ಮುಂದೆ ಇಡಬೇಕು. ಮೇಲ್ಮನವಿದಾರ ಜೈಲಿನಲ್ಲಿದ್ದಾಗ ಆತನ ಕೆಲಸದ ಸ್ವರೂಪದ ಬಗ್ಗೆ ಜೈಲು ಆಡಳಿತದ ವರದಿಯನ್ನು ಸಹ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಹೆಚ್ಚಿನ ಪರಿಗಣನೆಗೆ ಬಾಕಿ ಇದೆ, ಮೇಲ್ಮನವಿದಾರರಿಗೆ ನೀಡಲಾದ ಮರಣದಂಡನೆಯ ಪರಿಣಾಮ ಮತ್ತು ಕಾರ್ಯಾಚರಣೆಯನ್ನು ತಡೆಹಿಡಿಯಲಾಗುತ್ತದೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಕಾರಾಗೃಹಕ್ಕೆ ಸೂಚನೆಯನ್ನು ಕಳುಹಿಸಬೇಕು” ಎಂದು ನ್ಯಾಯಮೂರ್ತಿಗಳಾದ ಎಸ್.ಆರ್.ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠವು ಫೆ. 14ರದು ನೀಡಿದ ಆದೇಶದಲ್ಲಿ ಹೇಳಿದೆ.

ಮುಂದಿನ ವಿಚಾರಣೆಯು ಮಾರ್ಚ್ 22ಕ್ಕೆ ನಡೆಯಲಿದ್ದು, ಅದಕ್ಕೂ ಮೊದಲೇ, ಮಧ್ಯಪ್ರದೇಶ ಸರ್ಕಾರವು ಮೇಲ್ಮನವಿದಾರರಿಗೆ ಸಂಬಂಧಿಸಿದ ಎಲ್ಲಾ ಪರೀಕ್ಷಾಧಿಕಾರಿಗಳ ವರದಿಗಳನ್ನು ತನ್ನ ಮುಂದೆ ಇಡಬೇಕು ಎಂದು ಪೀಠ ಸೂಚಿಸಿದೆ.

“ನ್ಯಾಯದ ಹಿತಾಸಕ್ತಿಯಿಂದ ನಾವು ಮೇಲ್ಮನವಿದಾರರ ಮಾನಸಿಕ ದೃಢತೆಯ ಪರೀಕ್ಷಾ ವರದಿಯನ್ನು ಪಡೆಯಬೇಕೆಂದು ನಾವು ಭಾವಿಸುತ್ತೇವೆ. ಮಧ್ಯಪ್ರದೇಶದ ಇಂಧೋರ್ ಜಿಲ್ಲಾ ಮೆಂಟಲ್ ಕೇರ್ ಆಸ್ಪತ್ರೆಯ ನಿರ್ದೇಶಕರು ಅಪರಾಧಿ (ಅರ್ಜಿದಾರ)ಯ ಮಾನಸಿಕ ಮೌಲ್ಯಮಾಪನಕ್ಕಾಗಿ ಸೂಕ್ತ ತಂಡವನ್ನು ರಚಿಸುವಂತೆ ನಾವು ನಿರ್ದೇಶಿಸುತ್ತೇವೆ. ಅವರು ಮುಂದಿನ ವಿಚಾರಣೆಗೂ ಮೊದಲೇ ವರದಿಯನ್ನು ಪೀಠದ ಮುಂದೆ ಇರಿಸಬೇಕು” ಎಂದು ಸುಪ್ರೀಂ ತಿಳಿಸಿದೆ.

ಅದೇ ರೀತಿಯಲ್ಲಿ, ಅರ್ಜಿದಾರ ಅಪರಾಧಿಯನ್ನು ಪ್ರಸ್ತುತ ಇರಿಸಲಾಗಿರುವ ಜೈಲಿನ ಅಧಿಕಾರಿಗಳು ಎಲ್ಲಾ ರೀತಿಯಲ್ಲೂ ಅಪರಾಧಿಯ ಪ್ರವೇಶ, ನಡತೆಗಳ ಬಗ್ಗೆ ಮೌಲ್ಯಮಾಪನ ನಡೆಸಲು ಅನುಕೂಲವಾಗುವಂತೆ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಸುಪ್ರೀಂ ನಿರ್ದೇಶಿಸಿದೆ.

ಜೂನ್ 2018 ರಲ್ಲಿ, ಶಾಲಾ ತರಗತಿಗಳನ್ನು ಮುಗಿಸಿ ಹೊರಬಂದ ಬಾಲಕಿ ಶಾಲಾ ಆವರಣದಿಂದ ಕಾಣೆಯಾಗಿದ್ದಳು ಎಂದು ಮಂದಸೌರ್ನ ಪೊಲೀಸ್ ಠಾಣೆಯಲ್ಲಿ ಹುಡುಗಿಯ ಅಜ್ಜಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಮರುದಿನ ಬಾಲಕಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗಿದೆ. ತನ್ನನ್ನು ಅಪರಾಧಿಗಳು ನಿರ್ಜನ ಪ್ರದೇಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯನ್ನು ಬಾಲಕಿ ಪೊಲೀಸರಿಗೆ ವಿವರಿಸಿದ್ದಳು.

ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ಬಳಿಕ ವಿಚಾರಣಾ ನ್ಯಾಯಾಲಯ ಇಬ್ಬರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...