Homeಮುಖಪುಟಗ್ಯಾಂಗ್ ರೇಪ್ ಕೇಸ್ ದಾಖಲಿಸಿದ್ದ ಬಾಲಕಿಯ ತಂದೆ ಮೇಲೆ ಟ್ರಕ್ ಹರಿಸಿದ ದುಷ್ಕರ್ಮಿಗಳು

ಗ್ಯಾಂಗ್ ರೇಪ್ ಕೇಸ್ ದಾಖಲಿಸಿದ್ದ ಬಾಲಕಿಯ ತಂದೆ ಮೇಲೆ ಟ್ರಕ್ ಹರಿಸಿದ ದುಷ್ಕರ್ಮಿಗಳು

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಖ್ಯ ಆರೋಪಿ ಗೋಲು ಯಾದವ್ ತಂದೆ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ವಿರುದ್ಧ ಪ್ರಕರಣ ದಾಖಲಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದ ತಂದೆ ಮೇಲೆ, ದುಷ್ಕರ್ಮಿಗಳು ಆಸ್ಪತ್ರೆ ಹೊರ ಭಾಗದಲ್ಲಿ ಟ್ರಕ್ ಹರಿಸಿ ಕೊಲೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದ ತನ್ನ ಗ್ರಾಮದಲ್ಲಿ 13 ವರ್ಷದ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಾಲಕಿಯನ್ನು ವೈದ್ಯಕೀಯ ತಪಾಸಣೆಗಾಗಿ ತಂದೆ ಆಸ್ಪತ್ರೆಗೆ ಕರೆತಂದಿದ್ದರು. ಈ ಸಮಯದಲ್ಲಿ ಆಸ್ಪತ್ರೆಯ ಹೊರಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಖ್ಯ ಆರೋಪಿ ಗೋಲು ಯಾದವ್ ತಂದೆ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾನ್ಪುರದಿಂದ 100 ಕಿ.ಮೀ ದೂರದಲ್ಲಿರುವ ಕನ್ನೌಜ್ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ 

ಮುಖ್ಯ ಆರೋಪಿ ಗೋಲು ಯಾದವ್‌ನನ್ನು ಬಂಧಿಸಲಾಗಿದ್ದರೂ, ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾದಾಗಿನಿಂದಲೂ ಆರೋಪಿಗಳ ಕುಟುಂಬ ನಮಗೆ ಬೆದರಿಕೆ ಹಾಕುತ್ತಿದೆ. “ಪೊಲೀಸರು ಇದಕ್ಕೆ ಸಹಕರಿಸುತ್ತಿದ್ದಾರೆ” ಎಂದು ಸಂತ್ರಸ್ತ ಬಾಲಕಿಯ ಕುಟುಂಬವು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ.

“ನನ್ನ ಮಗನನ್ನು ಕೊಲೆ ಮಾಡಲಾಗಿದೆ, ಪೊಲೀಸರು ಇದಕ್ಕೆ ಸಹಕರಿಸಿದ್ದಾರೆ” ಎಂದು ಸಾವನ್ನಪ್ಪಿದ ವ್ಯಕ್ತಿಯ ತಂದೆ ಬುಧವಾರ ಬೆಳಿಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಮಂಗಳವಾರ ಬಾಲಕಿಯ ಕುಟುಂಬದ ಮತ್ತೊಬ್ಬ ಸದಸ್ಯರೂ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನಾವು ದೂರು ಸಲ್ಲಿಸಿದ ಕೂಡಲೇ, ಮುಖ್ಯ ಆರೋಪಿಗಳ ಹಿರಿಯ ಸಹೋದರ ನಮಗೆ ಬೆದರಿಕೆ ಹಾಕಲು ಪ್ರಾರಂಭಿಸಿದರು. ‘ನನ್ನ ತಂದೆ ಸಬ್ ಇನ್ಸ್‌ಪೆಕ್ಟರ್ ಎಚ್ಚರವಹಿಸಿ’ ಎಂದು ಅವರು ನಮಗೆ ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ

“ವೈದ್ಯಕೀಯ ಪರೀಕ್ಷೆ ನಡೆಯುತ್ತಿರುವಾಗ, ಮೃತ ವ್ಯಕ್ತಿ ಒಂದು ಕಪ್ ಚಹಾಕ್ಕಾಗಿ ಹೊರಗೆ ಹೋಗಿದ್ದರು. ಆ ಸಮಯದಲ್ಲಿ, ಟ್ರಕ್ ಅಪಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಕಾನ್ಪುರ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರು ಮೃತಪಟ್ಟಿದ್ದರು. ನಾವು ಅಪಘಾತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ “ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಡಾ.ಪ್ರೀತಿಂದರ್ ಸಿಂಗ್ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾನ್ಪುರ ಪೊಲೀಸರು ಮಂಗಳವಾರ ಸಾಮೂಹಿಕ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದರು.

“ತಂದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ನಾವು ಕೂಡಲೇ ಅದರ ಮೇಲೆ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತ ಬಾಲಕಿ ಆರೋಗ್ಯ ಸ್ಥಿರವಾಗಿದೆ. ಪ್ರಕರಣದ ತನಿಖೆಗಾಗಿ ನಾವು ಐದು ತಂಡಗಳನ್ನು ರಚಿಸಿದ್ದೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಂಗಳವಾರ ಹೇಳಿದ್ದರು.

ಘಟನೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ, ಎರಡು ಪ್ರಕರಣಗಳ ತ್ವರಿತ ತನಿಖೆಗೆ ಯುಪಿ ಪೊಲೀಸರು ಕಾನ್ಪುರ ಪೊಲೀಸರಿಗೆ ಆದೇಶಿಸಿದೆ. ಜೊತೆಗೆ ಅಪಘಾತ ಮಾಡಿದ ಟ್ರಕ್ ವಶಪಡಿಸಿಕೊಂಡು, ಚಾಲಕನನ್ನು ಬೇಗ ಬಂಧಿಸುವಂತೆ ಹೇಳಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...