Homeಮುಖಪುಟಉತ್ತರ ಪ್ರದೇಶ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ

ಉತ್ತರ ಪ್ರದೇಶ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ

ಉತ್ತರಪ್ರದೇಶದಲ್ಲಿ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರತರಹದ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಆದರೂ ಅದೇ ರೀತಿಯ ಪ್ರಕರಣಗಳು ಮುಂದುವರೆಯುತ್ತಿವೆ.

- Advertisement -
- Advertisement -

ಅತ್ಯಾಚಾರ ಮತ್ತು ಮಹಿಳೆಯರ ಮೆಲಿನ ಹಿಂಸೆ ಪ್ರಕರಣಗಳು ಉತ್ತರಪ್ರದೇಶದಲ್ಲಿ ಮತ್ತೆ ಮತ್ತೆ ವರದಿಯಾಗುತ್ತಲೇ ಇವೆ. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ಮತ್ತೊಂದು ಅಮಾನುಷ ಘಟನೆ ಜರುಗಿದೆ. ರಾಜ್ಯದ ಬರಾಬಂಕಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಪೂರ್ವಾಂಚಲ್ ಎಕ್ಸ್‌ಪ್ರೆಸ್ ಹೆದ್ದಾರಿ ಬಳಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ  ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶನಿವಾರ(ನ.21) ರಾತ್ರಿ ಸುಬೇಹಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ 19 ವರ್ಷದ ದಲಿತ ಹುಡುಗಿ ಬಹಿರ್ದೆಸೆಗೆಂದು ಹೊಲಕ್ಕೆ ಹೋಗುವ ಸಂದರ್ಭದಲ್ಲಿ, ದಾರಿಯಲ್ಲಿ ಮೊದಲೇ ಅಡಗಿಕುಳಿತಿದ್ದ ಆರೋಪಿಗಳು ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಆರೀಪ್ ಮತ್ತು ಮುದಾಸೀರ್‌ ಎಂದು ಗುರುತಿಸಲಾಗಿದೆ.

ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾದ ನಂತರ ಮನೆ ತಲುಪಿದ ಸಂತ್ರಸ್ತ ಯುವತಿ, ಘಟನೆಯ ಬಗ್ಗೆ ಕುಟುಂಬಕ್ಕೆ ತಿಳಿಸಿದ್ದಾಳೆ. ನಂತರ, ಭಾನುವಾರ ಬೆಳಿಗ್ಗೆ ಸಂತ್ರಸ್ತೆ ತನ್ನ ಸಹೋದರನೊಂದಿಗೆ ಸುಬೆಹಾ ಪೊಲೀಸ್ ಠಾಣೆಗೆ ತಲುಪಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭೂತ ಬಿಡಿಸುವ ನೆಪದಲ್ಲಿ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ!

ಸಂತ್ರಸ್ತೆ ಮತ್ತು ಸಂತ್ರಸ್ತೆಯ ಸಹೋದರನ ದೂರಿನ ಮೇಲೆ ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ಯುವತಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಸಂತೋಷ್ ಕುಮಾರ್ ತಿಳಿಸಿದ್ದಾರೆ. 

“ಆರೋಪಿ ಯುವಕರು ಸುಬೇಹಾ ಪೊಲೀಸ್ ಠಾಣೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಪೂರ್ವಾಂಚಲ್ ಎಕ್ಸ್‌ಪ್ರೆಸ್ ವೇ ನಿರ್ಮಾಣ ಕಾರ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆರಿಫ್ ಚಾಲಕರಾಗಿದ್ದರೆ, ಮುದಾಸೀರ್ ಅವರ ಸಹಾಯಕರಾಗಿದ್ದಾರೆ ಎಂದು ವಿಚಾರಣೆ ವೇಳೆ  ತಿಳಿದುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರತರಹದ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಆದರೂ ಕೂಡ ಸರ್ಕಾರ ಮಹಿಳೆಯರ ಸುರಕ್ಷತೆ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳು ವರದಿಯಾಗುತ್ತಲೇ ಇವೆ. ಅಲ್ಲಿ ಮಹಿಳೆಯರಿಗೆ ಸುರಕ್ಷತೆ ಎಂಬುದು ಕನಸಿನ ಮಾತಾಗಿದೆ. ರಾಜ್ಯದ ಹಲವು ಕುಟುಂಬಗಳಿಗೆ ಶೌಚಾಲಯಗಳು ಇಲ್ಲ. ಎಲ್ಲ ಹಳ್ಳಿ ಹಳ್ಳಿಗಳಲ್ಲೂ ಬಯಲು ಶೌಚಾಲಯಗಳು ನಿರ್ಮಾಣವಾಗಿವೆ. ಈ ಕುರಿತು ಕ್ರಮ ಕೈಗೊಳ್ಳದ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...