Homeಮುಖಪುಟಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಆರೋಪಿಗಳೆಲ್ಲರು ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಈ ದುಷ್ಕೃತ್ಯದಲ್ಲಿ ಶಾಸಕನ ಮಗನೂ ಭಾಗಿಯಾದ ಬಗ್ಗೆ ಶಂಕಿಸಲಾಗಿದೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿರುವ ಆತಂಕಕಾರಿ ಘಟನೆ ಜರುಗಿದೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಬಾಲಕಿಯ ತಂದೆಯ ದೂರಿನ ಮೇಲೆ ಮೊದಲು ಪೊಲೀಸರು ‘ಘನತೆಗೆ ಕುಂದು’ ಪ್ರಕರಣ ದಾಖಲಿಸಿದ್ದರು. ಆದರೆ ಬಾಲಕಿಯು ಮಹಿಳಾ ಪೊಲೀಸರ ಬಳಿ ಸಾಮೂಹಿಕ ಅತ್ಯಾಚಾರ ನಡೆದುದರ ಕುರಿತು ಮಾಹಿತಿ ನೀಡಿದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...