Homeಮುಖಪುಟಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಆರೋಪಿಗಳೆಲ್ಲರು ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಈ ದುಷ್ಕೃತ್ಯದಲ್ಲಿ ಶಾಸಕನ ಮಗನೂ ಭಾಗಿಯಾದ ಬಗ್ಗೆ ಶಂಕಿಸಲಾಗಿದೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿರುವ ಆತಂಕಕಾರಿ ಘಟನೆ ಜರುಗಿದೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಬಾಲಕಿಯ ತಂದೆಯ ದೂರಿನ ಮೇಲೆ ಮೊದಲು ಪೊಲೀಸರು ‘ಘನತೆಗೆ ಕುಂದು’ ಪ್ರಕರಣ ದಾಖಲಿಸಿದ್ದರು. ಆದರೆ ಬಾಲಕಿಯು ಮಹಿಳಾ ಪೊಲೀಸರ ಬಳಿ ಸಾಮೂಹಿಕ ಅತ್ಯಾಚಾರ ನಡೆದುದರ ಕುರಿತು ಮಾಹಿತಿ ನೀಡಿದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...