Homeಮುಖಪುಟಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಆರೋಪಿಗಳೆಲ್ಲರು ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಈ ದುಷ್ಕೃತ್ಯದಲ್ಲಿ ಶಾಸಕನ ಮಗನೂ ಭಾಗಿಯಾದ ಬಗ್ಗೆ ಶಂಕಿಸಲಾಗಿದೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿರುವ ಆತಂಕಕಾರಿ ಘಟನೆ ಜರುಗಿದೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಬಾಲಕಿಯ ತಂದೆಯ ದೂರಿನ ಮೇಲೆ ಮೊದಲು ಪೊಲೀಸರು ‘ಘನತೆಗೆ ಕುಂದು’ ಪ್ರಕರಣ ದಾಖಲಿಸಿದ್ದರು. ಆದರೆ ಬಾಲಕಿಯು ಮಹಿಳಾ ಪೊಲೀಸರ ಬಳಿ ಸಾಮೂಹಿಕ ಅತ್ಯಾಚಾರ ನಡೆದುದರ ಕುರಿತು ಮಾಹಿತಿ ನೀಡಿದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...