Homeಮುಖಪುಟಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರೆ, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -
- Advertisement -

ಕೆಲದಿನಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್ 19 ವರ್ಷದ ಯುವತಿ ಇಂದು ಬೆಳಿಗ್ಗೆ ದೆಹಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗಳು, ಮೂಳೆ ಮುರಿತ ಮತ್ತು ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದು, ನಿನ್ನೆ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರೆ, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಮಾತ್ರ ಪ್ರತಿಕ್ರಿಯಿಸಿದ್ದಾರೆ ಎಂದು ಯುವತಿಯ ಕುಟುಂಬ ಆರೋಪಿಸಿದೆ

”ನನ್ನ ತಾಯಿ, ಸಹೋದರಿ ಮತ್ತು ಅಣ್ಣ ಹುಲ್ಲನ್ನು ತರಲೆಂದು ಹೊಲಕ್ಕೆ ಹೋಗಿದ್ದರು. ನನ್ನ ಅಣ್ಣ ಹುಲ್ಲಿನ ಕಟ್ಟಿನೊಂದಿಗೆ ಮೊದಲು ಮನೆಗೆ ಹಿಂತಿರುಗಿದ್ದಾನೆ. ಆದರೆ ನನ್ನ ತಾಯಿ ಮತ್ತು ಸಹೋದರಿ ಸ್ವಲ್ಪ ದೂರದಲ್ಲೇ ಹುಲ್ಲನ್ನು ಕತ್ತರಿಸುತ್ತಿದ್ದರು. ಸಮಯದಲ್ಲಿ ನಾಲ್ಕರಿಂದ ಐದು ಜನ ಹಿಂದಿನಿಂದ ಬಂದು ದುಪ್ಪಟಾವನ್ನು ನನ್ನ ತಂಗಿಯ ಕುತ್ತಿಗೆಗೆ ಬಿಗಿದು ಸಜ್ಜೆ ಹೊಲಕ್ಕೆ ಎಳೆದೊಯ್ದಿದ್ದಾರೆ” ಎಂದು ಯುವತಿಯ ಸೋದರ ತಿಳಿಸಿದ್ದಾರೆ.

“ನಂತರ ಆಕೆ ಕಾಣಿಸುತ್ತಿಲ್ಲದಿರುವುದನ್ನು ಗಮನಿಸಿದ ನನ್ನ ತಾಯಿ ಸುತ್ತ ಮುತ್ತ ಹುಡುಕಾಡಿದ್ದಾರೆ. ಆಗ ನನ್ನ ತಂಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎಂದು ನಾವು ಪೊಲೀಸರಿಗೆ ತಿಳಿಸಿದರೂ ಅವರು ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ನಾಲ್ಕೈದು ದಿನಗಳ ನಂತರ  ದೂರು ದಾಖಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಮೊದಲು ಆಕೆಯನ್ನು ಏಮ್ಸ್‌ಗೆ ಕರೆದೊಯ್ಯಲಾಗುವುದು ಎಂದು ನಮಗೆ ತಿಳಿಸಲಾಯಿತು ಆದರೆ ಆಕೆಯನ್ನು ಸಫ್ದರ್ಜಂಗ್‌ಗೆ ಕರೆದೊಯ್ಯಲಾಯಿತು. ಆಕೆಯ ಕುತ್ತಿಗೆಯ ಮೂರು ಮೂಳೆಗಳು ಮುರಿದಿದ್ದವು. ಆಕೆಗೆ ಉಸಿರಾಡಲು ತೊಂದರೆಯಾಗುತ್ತಿತ್ತು ಎಂದು ಮೃತ ಯುವತಿಯ ಸಹೋದರ ತಿಳಿಸಿದ್ದಾರೆ.

ಕುಟುಂಬದ ಆರೋಪವನ್ನು ತಳ್ಳಿಹಾಕಿರುವ ಯುಪಿ ಪೊಲೀಸರು ನಾವು ಕುಟುಂಬಕ್ಕೆ ತಕ್ಷಣ ನೆರವು ನೀಡಿದ್ದೇವೆ ಎಂದಿದ್ದಾರೆ. ಇಂದು ಮಾತನಾಡಿರುವ ಹತ್ರಾಸ್ ಡಿಎಂ ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ನಾಲ್ವರು ಆರೋಪಿಗಳನ್ನು ಎಸ್‌ಸಿ /ಎಸ್‌ಟಿ ಕಾಯ್ದೆಯಡಿ ಬಂಧಿಸಲಾಗಿದೆ ಎಂದಿದ್ದಾರೆ. ಜೊತೆಗೆ ಆಕೆಯ ನಾಲಿಗೆ ಕತ್ತರಿಸಲ್ಪಟ್ಟಿರಲಿಲ್ಲ ಎಂದು ಹೇಳಿದ್ದಾರೆ.

 

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ / ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇತ್ತ ಮೃತ ಯುವತಿಯ ಸಹೋದರ ಪೊಲೀಸ್ ತನಿಖೆ ಸಮಾಧಾನ ತಂದಿಲ್ಲ, ನಮಗೆ ನ್ಯಾಯ ಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...