Homeಮುಖಪುಟಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

ಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

- Advertisement -
- Advertisement -

ಏನಾಯ್ತು ನಿಮ್ಮ ಭರವಸೆ?
ಪ್ರಧಾನಿ ಮೋದಿ, ಗಂಗಾ ನದಿ ಪುನರುಜ್ಜೀವನಗೊಳಿಸುವ ನಿಮ್ಮ ಭರವಸೆ ಏನಾಯ್ತು?
ಪ್ರಧಾನಿ ಮೋದಿ ಈಗ ಮತ್ತೆ ವಾರಣಾಸಿಯಲ್ಲಿ ಮರುಆಯ್ಕೆ ಬಯಸಿದ್ದಾರೆ. 2014ರಲ್ಲಿ ಗಂಗಾ ಸ್ವಚ್ಛಗೊಳಿಸುವ ಭರವಸೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಚುನಾವಣೆ ಪ್ರಚಾರ ಮತ್ತು ಗೆಲುವಿನ ನಂತರ ಅವರು, ‘ ವಾರಣಾಸಿಗೆ ನಾನಾಗಿಯೇ ಬರಲಿಲ್ಲ. ಗಂಗಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ’ ಎಂದು ಭಾವನಾತ್ಮಕವಾಗಿ ಮಾತಾಡಿದ್ದರು.

ಗಂಗಾ ನದಿಯ ಪುನರುಜ್ಜಿವನಕ್ಕಾಗಿ 5 ವರ್ಷಗಳ ‘ಗಂಗಾ ನಮಾಮಿ ಮಿಷನ್’ ಎಂಬ ಯೋಜನೆಯನ್ನು ಮೋದಿ ಆರಂಭಿಸಿದರು. 2014-15ರಿಂದ 2018-19ರ ಅವಧಿಗೆ ಈ ಯೋಜನೆಗೆ 20,000 ಕೋಟಿ ರೂಪಾಯಿಗಳ ಬಜೆಟ್ ಘೋಷಿಸಲಾಯಿತು. ಈಗ ಡೆಡ್‍ಲೈನ್ ಮುಗಿಯುತ್ತ ಬಂದಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು, ‘ಏನಾಯ್ತು ನಿಮ್ಮ ಭರವಸೆ?’ ಎಂದು ಪ್ರಶ್ನಿಸುತ್ತಿದ್ದಾರೆ.

ಗಂಗಾ ಉಳಿವಿಗೆ ಹೋರಾಟ ನಡೆಸಿದ್ದ ಪ್ರೊ. ಜೆ.ಬಿ, ಅಗರವಾಲ್ ಅವರ ಶಿಷ್ಯ 26 ವರ್ಷದ ಬ್ರಹ್ಮಾಚಾರ್ಯ ಆತ್ಮಬೋಧಾನಂದ ಸ್ವಾಮಿಯವರು, ಗಂಗೆಯ ನಿರ್ನಾಮದ ವಿರುದ್ಧ 155 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

‘ಮೋದಿ ಸರ್ಕಾರವು ಪನಾಮಾ-ಸೂಯೆಜ್ ಕಾಲುವೆ ಮಾದರಿಯನ್ನು ಇಲ್ಲಿ ಅಳವಡಿಸಲು ಯತ್ನಿಸುತ್ತಿದೆ. ನದಿಪಾತ್ರದಲ್ಲಿ 5 ವರ್ಷಗಳಲ್ಲಿ ಗಣಿಗಾರಿಕೆ ಗರಿಷ್ಠ ಮಟ್ಟವನ್ನು ತಲುಪಿದೆ’ ಎಂದು ಆತ್ಮಬೋಧಾನಂದ ಟೀಕಿಸುತ್ತಾರೆ.
ಇದರ ಕುರಿತಾಗಿ ‘ದಿ ಕ್ವಿಂಟ್’ ಒಂದು ವಿಡಿಯೋ ವರದಿ ಮಾಡಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು ಕಿಡಿಕಾರಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ:
ವಿಡಿಯೊ

ಗಂಗಾಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಳು ಎಂದು 5 ವರ್ಷದ ಹಿಂದೆ ಹೇಳಿದ ಮೋದಿ, ಗಂಗೆಯಿಂದ ನಾನು ಪಡೆಯುವುದೇನೂ ಇಲ್ಲ…ಕೊಡುವುದಷ್ಟೇ ಅದೆ ಇದೆ ಎನ್ನುತ್ತ ಮೋದಿ ಗಂಗಾ ಪುನಶ್ಚೇತನದ ಮಾತು ಆಡಿದ್ದರು. ಈ 5 ವರ್ಷಗಳಲ್ಲಿ ಗಂಗೆಗೆ ಈ ಹಿಂದೆ ಎಂದೂ ಆಗದಷ್ಟು ಹಿಂಸೆ, ಕಿರುಕುಳ ನೀಡಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಒಂದು ಹೆಡ್ ಆದರೆ ಇನ್ನೊಂದು ಟೇಲ್. ಇವರೆಲ್ಲ ಗಂಗೆ ಹೆಸರಲ್ಲಿ ಅಧಿಕಾರ ಗಳಿಸುತ್ತಾರೆ, ನಂತರ ಗಂಗೆಯನ್ನೇ ಮಾರಲು ಶುರು ಮಾಡುತ್ತಾರೆ…
– ಬ್ರಹ್ಮಾಚಾರ್ಯ ಆತ್ಮಬೋಧಾನಂದ, ಗಂಗಾ ಆ್ಯಕ್ಟಿವಿಸ್ಟ್ ಮತ್ತು ಸ್ವಾಮೀಜಿ

ಅವರು (ಬಿಜೆಪಿ)ಹೀಗೆಲ್ಲ ಜನರ ನಂಬಿಕೆ ಜೊತೆ ಆಟವಾಡಿದರೆ ಮತ್ತೆ ಜನ ಅವರಿಗೆ ವೋಟ್ ಹಾಕಲ್ಲ. ಗಂಗಾ ಪುನಶ್ಚೇತನದ ಬಗ್ಗೆ ಸುಳ್ಳು ಭರವಸೆ ನೀಡುವ ಬದಲು, ಸೀರಿಯಸ್ ಆಗಿ ಕೆಲಸ ಮಾಡಲಿ. ಇದು ಧಾರ್ಮಿಕ ವಿಷಯ, ಜನರ ನಂಬಿಕೆಯ ಭಾವನಾತ್ಮ ವಿಷಯ….. – ರಾಮೇಶ್ವರ್ ಗೌರ್
-ಗಂಗಾ ಆ್ಯಕ್ಟಿವಿಸ್ಟ್

ಗಂಗಾನದಿಯಲ್ಲಿ ಕಲ್ಲು, ಬಂಡೆಗಳಿಗಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ನದಿಗಳ ನೈಸರ್ಗಿಕ ನಿಯಮದ ಪ್ರಕಾರ, ಯಾವುದನ್ನು ಮರುಸೃಷ್ಟಿಸಲು ಸಾಧ್ಯವೋ ಅಂಥವನ್ನಷ್ಟೇ ಗಣಿಗಾರಿಕೆ ಮಾಡಬೇಕು…ಕಲ್ಲು, ಬಂಡೆಗಳನ್ನು ಸೃಷ್ಟಿಸಲಾಗಲ್ಲ…. ನಲವತ್ತು ಅಡಿ ಆಳದ ಗುಂಡಿಗಳನ್ನು ತೆಗೆಯಲಾಗಿದೆ…ಜನ ಇಲ್ಲಿ ಮುಳುಗಿ ಸಾಯೂತ್ತಲೂ ಇದ್ದಾರೆ….
ಅವರು ಬರೀ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ. ಅವರು ಅಭಿವೃದ್ಧಿಗಾಗಿ ಕಲ್ಲು, ಜಲ್ಲಿ, ಮರಳನ್ನು ಬೇರೆ ಎಲ್ಲಿಂದಲಾದರೂ ಪಡೆಯಬಹುದು. ಆದರೆ ಬೇರೆಲ್ಲೂ ಗಂಗಾನದಿಯನ್ನು ಪಡೆಯಲು ಸಾಧ್ಯವಿಲ್ಲ… – ಸ್ವಾಮಿ ಶಿವಾನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...