Homeಮುಖಪುಟಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

ಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

- Advertisement -
- Advertisement -

ಏನಾಯ್ತು ನಿಮ್ಮ ಭರವಸೆ?
ಪ್ರಧಾನಿ ಮೋದಿ, ಗಂಗಾ ನದಿ ಪುನರುಜ್ಜೀವನಗೊಳಿಸುವ ನಿಮ್ಮ ಭರವಸೆ ಏನಾಯ್ತು?
ಪ್ರಧಾನಿ ಮೋದಿ ಈಗ ಮತ್ತೆ ವಾರಣಾಸಿಯಲ್ಲಿ ಮರುಆಯ್ಕೆ ಬಯಸಿದ್ದಾರೆ. 2014ರಲ್ಲಿ ಗಂಗಾ ಸ್ವಚ್ಛಗೊಳಿಸುವ ಭರವಸೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಚುನಾವಣೆ ಪ್ರಚಾರ ಮತ್ತು ಗೆಲುವಿನ ನಂತರ ಅವರು, ‘ ವಾರಣಾಸಿಗೆ ನಾನಾಗಿಯೇ ಬರಲಿಲ್ಲ. ಗಂಗಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ’ ಎಂದು ಭಾವನಾತ್ಮಕವಾಗಿ ಮಾತಾಡಿದ್ದರು.

ಗಂಗಾ ನದಿಯ ಪುನರುಜ್ಜಿವನಕ್ಕಾಗಿ 5 ವರ್ಷಗಳ ‘ಗಂಗಾ ನಮಾಮಿ ಮಿಷನ್’ ಎಂಬ ಯೋಜನೆಯನ್ನು ಮೋದಿ ಆರಂಭಿಸಿದರು. 2014-15ರಿಂದ 2018-19ರ ಅವಧಿಗೆ ಈ ಯೋಜನೆಗೆ 20,000 ಕೋಟಿ ರೂಪಾಯಿಗಳ ಬಜೆಟ್ ಘೋಷಿಸಲಾಯಿತು. ಈಗ ಡೆಡ್‍ಲೈನ್ ಮುಗಿಯುತ್ತ ಬಂದಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು, ‘ಏನಾಯ್ತು ನಿಮ್ಮ ಭರವಸೆ?’ ಎಂದು ಪ್ರಶ್ನಿಸುತ್ತಿದ್ದಾರೆ.

ಗಂಗಾ ಉಳಿವಿಗೆ ಹೋರಾಟ ನಡೆಸಿದ್ದ ಪ್ರೊ. ಜೆ.ಬಿ, ಅಗರವಾಲ್ ಅವರ ಶಿಷ್ಯ 26 ವರ್ಷದ ಬ್ರಹ್ಮಾಚಾರ್ಯ ಆತ್ಮಬೋಧಾನಂದ ಸ್ವಾಮಿಯವರು, ಗಂಗೆಯ ನಿರ್ನಾಮದ ವಿರುದ್ಧ 155 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

‘ಮೋದಿ ಸರ್ಕಾರವು ಪನಾಮಾ-ಸೂಯೆಜ್ ಕಾಲುವೆ ಮಾದರಿಯನ್ನು ಇಲ್ಲಿ ಅಳವಡಿಸಲು ಯತ್ನಿಸುತ್ತಿದೆ. ನದಿಪಾತ್ರದಲ್ಲಿ 5 ವರ್ಷಗಳಲ್ಲಿ ಗಣಿಗಾರಿಕೆ ಗರಿಷ್ಠ ಮಟ್ಟವನ್ನು ತಲುಪಿದೆ’ ಎಂದು ಆತ್ಮಬೋಧಾನಂದ ಟೀಕಿಸುತ್ತಾರೆ.
ಇದರ ಕುರಿತಾಗಿ ‘ದಿ ಕ್ವಿಂಟ್’ ಒಂದು ವಿಡಿಯೋ ವರದಿ ಮಾಡಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು ಕಿಡಿಕಾರಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ:
ವಿಡಿಯೊ

ಗಂಗಾಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಳು ಎಂದು 5 ವರ್ಷದ ಹಿಂದೆ ಹೇಳಿದ ಮೋದಿ, ಗಂಗೆಯಿಂದ ನಾನು ಪಡೆಯುವುದೇನೂ ಇಲ್ಲ…ಕೊಡುವುದಷ್ಟೇ ಅದೆ ಇದೆ ಎನ್ನುತ್ತ ಮೋದಿ ಗಂಗಾ ಪುನಶ್ಚೇತನದ ಮಾತು ಆಡಿದ್ದರು. ಈ 5 ವರ್ಷಗಳಲ್ಲಿ ಗಂಗೆಗೆ ಈ ಹಿಂದೆ ಎಂದೂ ಆಗದಷ್ಟು ಹಿಂಸೆ, ಕಿರುಕುಳ ನೀಡಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಒಂದು ಹೆಡ್ ಆದರೆ ಇನ್ನೊಂದು ಟೇಲ್. ಇವರೆಲ್ಲ ಗಂಗೆ ಹೆಸರಲ್ಲಿ ಅಧಿಕಾರ ಗಳಿಸುತ್ತಾರೆ, ನಂತರ ಗಂಗೆಯನ್ನೇ ಮಾರಲು ಶುರು ಮಾಡುತ್ತಾರೆ…
– ಬ್ರಹ್ಮಾಚಾರ್ಯ ಆತ್ಮಬೋಧಾನಂದ, ಗಂಗಾ ಆ್ಯಕ್ಟಿವಿಸ್ಟ್ ಮತ್ತು ಸ್ವಾಮೀಜಿ

ಅವರು (ಬಿಜೆಪಿ)ಹೀಗೆಲ್ಲ ಜನರ ನಂಬಿಕೆ ಜೊತೆ ಆಟವಾಡಿದರೆ ಮತ್ತೆ ಜನ ಅವರಿಗೆ ವೋಟ್ ಹಾಕಲ್ಲ. ಗಂಗಾ ಪುನಶ್ಚೇತನದ ಬಗ್ಗೆ ಸುಳ್ಳು ಭರವಸೆ ನೀಡುವ ಬದಲು, ಸೀರಿಯಸ್ ಆಗಿ ಕೆಲಸ ಮಾಡಲಿ. ಇದು ಧಾರ್ಮಿಕ ವಿಷಯ, ಜನರ ನಂಬಿಕೆಯ ಭಾವನಾತ್ಮ ವಿಷಯ….. – ರಾಮೇಶ್ವರ್ ಗೌರ್
-ಗಂಗಾ ಆ್ಯಕ್ಟಿವಿಸ್ಟ್

ಗಂಗಾನದಿಯಲ್ಲಿ ಕಲ್ಲು, ಬಂಡೆಗಳಿಗಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ನದಿಗಳ ನೈಸರ್ಗಿಕ ನಿಯಮದ ಪ್ರಕಾರ, ಯಾವುದನ್ನು ಮರುಸೃಷ್ಟಿಸಲು ಸಾಧ್ಯವೋ ಅಂಥವನ್ನಷ್ಟೇ ಗಣಿಗಾರಿಕೆ ಮಾಡಬೇಕು…ಕಲ್ಲು, ಬಂಡೆಗಳನ್ನು ಸೃಷ್ಟಿಸಲಾಗಲ್ಲ…. ನಲವತ್ತು ಅಡಿ ಆಳದ ಗುಂಡಿಗಳನ್ನು ತೆಗೆಯಲಾಗಿದೆ…ಜನ ಇಲ್ಲಿ ಮುಳುಗಿ ಸಾಯೂತ್ತಲೂ ಇದ್ದಾರೆ….
ಅವರು ಬರೀ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ. ಅವರು ಅಭಿವೃದ್ಧಿಗಾಗಿ ಕಲ್ಲು, ಜಲ್ಲಿ, ಮರಳನ್ನು ಬೇರೆ ಎಲ್ಲಿಂದಲಾದರೂ ಪಡೆಯಬಹುದು. ಆದರೆ ಬೇರೆಲ್ಲೂ ಗಂಗಾನದಿಯನ್ನು ಪಡೆಯಲು ಸಾಧ್ಯವಿಲ್ಲ… – ಸ್ವಾಮಿ ಶಿವಾನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...