Homeಮುಖಪುಟಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

ಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

- Advertisement -
- Advertisement -

ಏನಾಯ್ತು ನಿಮ್ಮ ಭರವಸೆ?
ಪ್ರಧಾನಿ ಮೋದಿ, ಗಂಗಾ ನದಿ ಪುನರುಜ್ಜೀವನಗೊಳಿಸುವ ನಿಮ್ಮ ಭರವಸೆ ಏನಾಯ್ತು?
ಪ್ರಧಾನಿ ಮೋದಿ ಈಗ ಮತ್ತೆ ವಾರಣಾಸಿಯಲ್ಲಿ ಮರುಆಯ್ಕೆ ಬಯಸಿದ್ದಾರೆ. 2014ರಲ್ಲಿ ಗಂಗಾ ಸ್ವಚ್ಛಗೊಳಿಸುವ ಭರವಸೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಚುನಾವಣೆ ಪ್ರಚಾರ ಮತ್ತು ಗೆಲುವಿನ ನಂತರ ಅವರು, ‘ ವಾರಣಾಸಿಗೆ ನಾನಾಗಿಯೇ ಬರಲಿಲ್ಲ. ಗಂಗಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ’ ಎಂದು ಭಾವನಾತ್ಮಕವಾಗಿ ಮಾತಾಡಿದ್ದರು.

ಗಂಗಾ ನದಿಯ ಪುನರುಜ್ಜಿವನಕ್ಕಾಗಿ 5 ವರ್ಷಗಳ ‘ಗಂಗಾ ನಮಾಮಿ ಮಿಷನ್’ ಎಂಬ ಯೋಜನೆಯನ್ನು ಮೋದಿ ಆರಂಭಿಸಿದರು. 2014-15ರಿಂದ 2018-19ರ ಅವಧಿಗೆ ಈ ಯೋಜನೆಗೆ 20,000 ಕೋಟಿ ರೂಪಾಯಿಗಳ ಬಜೆಟ್ ಘೋಷಿಸಲಾಯಿತು. ಈಗ ಡೆಡ್‍ಲೈನ್ ಮುಗಿಯುತ್ತ ಬಂದಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು, ‘ಏನಾಯ್ತು ನಿಮ್ಮ ಭರವಸೆ?’ ಎಂದು ಪ್ರಶ್ನಿಸುತ್ತಿದ್ದಾರೆ.

ಗಂಗಾ ಉಳಿವಿಗೆ ಹೋರಾಟ ನಡೆಸಿದ್ದ ಪ್ರೊ. ಜೆ.ಬಿ, ಅಗರವಾಲ್ ಅವರ ಶಿಷ್ಯ 26 ವರ್ಷದ ಬ್ರಹ್ಮಾಚಾರ್ಯ ಆತ್ಮಬೋಧಾನಂದ ಸ್ವಾಮಿಯವರು, ಗಂಗೆಯ ನಿರ್ನಾಮದ ವಿರುದ್ಧ 155 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

‘ಮೋದಿ ಸರ್ಕಾರವು ಪನಾಮಾ-ಸೂಯೆಜ್ ಕಾಲುವೆ ಮಾದರಿಯನ್ನು ಇಲ್ಲಿ ಅಳವಡಿಸಲು ಯತ್ನಿಸುತ್ತಿದೆ. ನದಿಪಾತ್ರದಲ್ಲಿ 5 ವರ್ಷಗಳಲ್ಲಿ ಗಣಿಗಾರಿಕೆ ಗರಿಷ್ಠ ಮಟ್ಟವನ್ನು ತಲುಪಿದೆ’ ಎಂದು ಆತ್ಮಬೋಧಾನಂದ ಟೀಕಿಸುತ್ತಾರೆ.
ಇದರ ಕುರಿತಾಗಿ ‘ದಿ ಕ್ವಿಂಟ್’ ಒಂದು ವಿಡಿಯೋ ವರದಿ ಮಾಡಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು ಕಿಡಿಕಾರಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ:
ವಿಡಿಯೊ

ಗಂಗಾಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಳು ಎಂದು 5 ವರ್ಷದ ಹಿಂದೆ ಹೇಳಿದ ಮೋದಿ, ಗಂಗೆಯಿಂದ ನಾನು ಪಡೆಯುವುದೇನೂ ಇಲ್ಲ…ಕೊಡುವುದಷ್ಟೇ ಅದೆ ಇದೆ ಎನ್ನುತ್ತ ಮೋದಿ ಗಂಗಾ ಪುನಶ್ಚೇತನದ ಮಾತು ಆಡಿದ್ದರು. ಈ 5 ವರ್ಷಗಳಲ್ಲಿ ಗಂಗೆಗೆ ಈ ಹಿಂದೆ ಎಂದೂ ಆಗದಷ್ಟು ಹಿಂಸೆ, ಕಿರುಕುಳ ನೀಡಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಒಂದು ಹೆಡ್ ಆದರೆ ಇನ್ನೊಂದು ಟೇಲ್. ಇವರೆಲ್ಲ ಗಂಗೆ ಹೆಸರಲ್ಲಿ ಅಧಿಕಾರ ಗಳಿಸುತ್ತಾರೆ, ನಂತರ ಗಂಗೆಯನ್ನೇ ಮಾರಲು ಶುರು ಮಾಡುತ್ತಾರೆ…
– ಬ್ರಹ್ಮಾಚಾರ್ಯ ಆತ್ಮಬೋಧಾನಂದ, ಗಂಗಾ ಆ್ಯಕ್ಟಿವಿಸ್ಟ್ ಮತ್ತು ಸ್ವಾಮೀಜಿ

ಅವರು (ಬಿಜೆಪಿ)ಹೀಗೆಲ್ಲ ಜನರ ನಂಬಿಕೆ ಜೊತೆ ಆಟವಾಡಿದರೆ ಮತ್ತೆ ಜನ ಅವರಿಗೆ ವೋಟ್ ಹಾಕಲ್ಲ. ಗಂಗಾ ಪುನಶ್ಚೇತನದ ಬಗ್ಗೆ ಸುಳ್ಳು ಭರವಸೆ ನೀಡುವ ಬದಲು, ಸೀರಿಯಸ್ ಆಗಿ ಕೆಲಸ ಮಾಡಲಿ. ಇದು ಧಾರ್ಮಿಕ ವಿಷಯ, ಜನರ ನಂಬಿಕೆಯ ಭಾವನಾತ್ಮ ವಿಷಯ….. – ರಾಮೇಶ್ವರ್ ಗೌರ್
-ಗಂಗಾ ಆ್ಯಕ್ಟಿವಿಸ್ಟ್

ಗಂಗಾನದಿಯಲ್ಲಿ ಕಲ್ಲು, ಬಂಡೆಗಳಿಗಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ನದಿಗಳ ನೈಸರ್ಗಿಕ ನಿಯಮದ ಪ್ರಕಾರ, ಯಾವುದನ್ನು ಮರುಸೃಷ್ಟಿಸಲು ಸಾಧ್ಯವೋ ಅಂಥವನ್ನಷ್ಟೇ ಗಣಿಗಾರಿಕೆ ಮಾಡಬೇಕು…ಕಲ್ಲು, ಬಂಡೆಗಳನ್ನು ಸೃಷ್ಟಿಸಲಾಗಲ್ಲ…. ನಲವತ್ತು ಅಡಿ ಆಳದ ಗುಂಡಿಗಳನ್ನು ತೆಗೆಯಲಾಗಿದೆ…ಜನ ಇಲ್ಲಿ ಮುಳುಗಿ ಸಾಯೂತ್ತಲೂ ಇದ್ದಾರೆ….
ಅವರು ಬರೀ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ. ಅವರು ಅಭಿವೃದ್ಧಿಗಾಗಿ ಕಲ್ಲು, ಜಲ್ಲಿ, ಮರಳನ್ನು ಬೇರೆ ಎಲ್ಲಿಂದಲಾದರೂ ಪಡೆಯಬಹುದು. ಆದರೆ ಬೇರೆಲ್ಲೂ ಗಂಗಾನದಿಯನ್ನು ಪಡೆಯಲು ಸಾಧ್ಯವಿಲ್ಲ… – ಸ್ವಾಮಿ ಶಿವಾನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...