Homeಮುಖಪುಟಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

ಗಂಗಾ ಮಾತೆಯ ಹೆಸರಿನಲ್ಲಿ ಹಣ ನುಂಗಿ, ಸುಳ್ಳು ಹೇಳಿದ ಮೋದಿ. ಒಂದು ವಿಡಿಯೋ

- Advertisement -
- Advertisement -

ಏನಾಯ್ತು ನಿಮ್ಮ ಭರವಸೆ?
ಪ್ರಧಾನಿ ಮೋದಿ, ಗಂಗಾ ನದಿ ಪುನರುಜ್ಜೀವನಗೊಳಿಸುವ ನಿಮ್ಮ ಭರವಸೆ ಏನಾಯ್ತು?
ಪ್ರಧಾನಿ ಮೋದಿ ಈಗ ಮತ್ತೆ ವಾರಣಾಸಿಯಲ್ಲಿ ಮರುಆಯ್ಕೆ ಬಯಸಿದ್ದಾರೆ. 2014ರಲ್ಲಿ ಗಂಗಾ ಸ್ವಚ್ಛಗೊಳಿಸುವ ಭರವಸೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಚುನಾವಣೆ ಪ್ರಚಾರ ಮತ್ತು ಗೆಲುವಿನ ನಂತರ ಅವರು, ‘ ವಾರಣಾಸಿಗೆ ನಾನಾಗಿಯೇ ಬರಲಿಲ್ಲ. ಗಂಗಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ’ ಎಂದು ಭಾವನಾತ್ಮಕವಾಗಿ ಮಾತಾಡಿದ್ದರು.

ಗಂಗಾ ನದಿಯ ಪುನರುಜ್ಜಿವನಕ್ಕಾಗಿ 5 ವರ್ಷಗಳ ‘ಗಂಗಾ ನಮಾಮಿ ಮಿಷನ್’ ಎಂಬ ಯೋಜನೆಯನ್ನು ಮೋದಿ ಆರಂಭಿಸಿದರು. 2014-15ರಿಂದ 2018-19ರ ಅವಧಿಗೆ ಈ ಯೋಜನೆಗೆ 20,000 ಕೋಟಿ ರೂಪಾಯಿಗಳ ಬಜೆಟ್ ಘೋಷಿಸಲಾಯಿತು. ಈಗ ಡೆಡ್‍ಲೈನ್ ಮುಗಿಯುತ್ತ ಬಂದಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು, ‘ಏನಾಯ್ತು ನಿಮ್ಮ ಭರವಸೆ?’ ಎಂದು ಪ್ರಶ್ನಿಸುತ್ತಿದ್ದಾರೆ.

ಗಂಗಾ ಉಳಿವಿಗೆ ಹೋರಾಟ ನಡೆಸಿದ್ದ ಪ್ರೊ. ಜೆ.ಬಿ, ಅಗರವಾಲ್ ಅವರ ಶಿಷ್ಯ 26 ವರ್ಷದ ಬ್ರಹ್ಮಾಚಾರ್ಯ ಆತ್ಮಬೋಧಾನಂದ ಸ್ವಾಮಿಯವರು, ಗಂಗೆಯ ನಿರ್ನಾಮದ ವಿರುದ್ಧ 155 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

‘ಮೋದಿ ಸರ್ಕಾರವು ಪನಾಮಾ-ಸೂಯೆಜ್ ಕಾಲುವೆ ಮಾದರಿಯನ್ನು ಇಲ್ಲಿ ಅಳವಡಿಸಲು ಯತ್ನಿಸುತ್ತಿದೆ. ನದಿಪಾತ್ರದಲ್ಲಿ 5 ವರ್ಷಗಳಲ್ಲಿ ಗಣಿಗಾರಿಕೆ ಗರಿಷ್ಠ ಮಟ್ಟವನ್ನು ತಲುಪಿದೆ’ ಎಂದು ಆತ್ಮಬೋಧಾನಂದ ಟೀಕಿಸುತ್ತಾರೆ.
ಇದರ ಕುರಿತಾಗಿ ‘ದಿ ಕ್ವಿಂಟ್’ ಒಂದು ವಿಡಿಯೋ ವರದಿ ಮಾಡಿದ್ದು, ಪರಿಸರವಾದಿಗಳು ಮತ್ತು ಗಂಗಾ ಆ್ಯಕ್ಟಿವಿಸ್ಟ್‍ಗಳು ಕಿಡಿಕಾರಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ:
ವಿಡಿಯೊ

ಗಂಗಾಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಳು ಎಂದು 5 ವರ್ಷದ ಹಿಂದೆ ಹೇಳಿದ ಮೋದಿ, ಗಂಗೆಯಿಂದ ನಾನು ಪಡೆಯುವುದೇನೂ ಇಲ್ಲ…ಕೊಡುವುದಷ್ಟೇ ಅದೆ ಇದೆ ಎನ್ನುತ್ತ ಮೋದಿ ಗಂಗಾ ಪುನಶ್ಚೇತನದ ಮಾತು ಆಡಿದ್ದರು. ಈ 5 ವರ್ಷಗಳಲ್ಲಿ ಗಂಗೆಗೆ ಈ ಹಿಂದೆ ಎಂದೂ ಆಗದಷ್ಟು ಹಿಂಸೆ, ಕಿರುಕುಳ ನೀಡಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಒಂದು ಹೆಡ್ ಆದರೆ ಇನ್ನೊಂದು ಟೇಲ್. ಇವರೆಲ್ಲ ಗಂಗೆ ಹೆಸರಲ್ಲಿ ಅಧಿಕಾರ ಗಳಿಸುತ್ತಾರೆ, ನಂತರ ಗಂಗೆಯನ್ನೇ ಮಾರಲು ಶುರು ಮಾಡುತ್ತಾರೆ…
– ಬ್ರಹ್ಮಾಚಾರ್ಯ ಆತ್ಮಬೋಧಾನಂದ, ಗಂಗಾ ಆ್ಯಕ್ಟಿವಿಸ್ಟ್ ಮತ್ತು ಸ್ವಾಮೀಜಿ

ಅವರು (ಬಿಜೆಪಿ)ಹೀಗೆಲ್ಲ ಜನರ ನಂಬಿಕೆ ಜೊತೆ ಆಟವಾಡಿದರೆ ಮತ್ತೆ ಜನ ಅವರಿಗೆ ವೋಟ್ ಹಾಕಲ್ಲ. ಗಂಗಾ ಪುನಶ್ಚೇತನದ ಬಗ್ಗೆ ಸುಳ್ಳು ಭರವಸೆ ನೀಡುವ ಬದಲು, ಸೀರಿಯಸ್ ಆಗಿ ಕೆಲಸ ಮಾಡಲಿ. ಇದು ಧಾರ್ಮಿಕ ವಿಷಯ, ಜನರ ನಂಬಿಕೆಯ ಭಾವನಾತ್ಮ ವಿಷಯ….. – ರಾಮೇಶ್ವರ್ ಗೌರ್
-ಗಂಗಾ ಆ್ಯಕ್ಟಿವಿಸ್ಟ್

ಗಂಗಾನದಿಯಲ್ಲಿ ಕಲ್ಲು, ಬಂಡೆಗಳಿಗಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ನದಿಗಳ ನೈಸರ್ಗಿಕ ನಿಯಮದ ಪ್ರಕಾರ, ಯಾವುದನ್ನು ಮರುಸೃಷ್ಟಿಸಲು ಸಾಧ್ಯವೋ ಅಂಥವನ್ನಷ್ಟೇ ಗಣಿಗಾರಿಕೆ ಮಾಡಬೇಕು…ಕಲ್ಲು, ಬಂಡೆಗಳನ್ನು ಸೃಷ್ಟಿಸಲಾಗಲ್ಲ…. ನಲವತ್ತು ಅಡಿ ಆಳದ ಗುಂಡಿಗಳನ್ನು ತೆಗೆಯಲಾಗಿದೆ…ಜನ ಇಲ್ಲಿ ಮುಳುಗಿ ಸಾಯೂತ್ತಲೂ ಇದ್ದಾರೆ….
ಅವರು ಬರೀ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ. ಅವರು ಅಭಿವೃದ್ಧಿಗಾಗಿ ಕಲ್ಲು, ಜಲ್ಲಿ, ಮರಳನ್ನು ಬೇರೆ ಎಲ್ಲಿಂದಲಾದರೂ ಪಡೆಯಬಹುದು. ಆದರೆ ಬೇರೆಲ್ಲೂ ಗಂಗಾನದಿಯನ್ನು ಪಡೆಯಲು ಸಾಧ್ಯವಿಲ್ಲ… – ಸ್ವಾಮಿ ಶಿವಾನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...